ಬೆಂಗಳೂರು: ವಿಧಾನಸಭಾ ಉಪಚುನಾವಣೆ ಕಾವು ಹೆಚ್ಚುತ್ತಿದೆ. ಏನಾದರೂ ಮಾಡಿ, ಈ ಉಪಚುನಾವಣೆ ಗೆದ್ದರೆ ಸಾಕು ಅಂತ ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಸಮಯವನ್ನೂ ಲೆಕ್ಕಿಸದೇ ಪ್ರಚಾರ ಕಾರ್ಯದಲ್ಲಿ ಅಭ್ಯರ್ಥಿಗಳು ಬ್ಯುಸಿಯಾಗಿದ್ದಾರೆ. ಇಂದೂ ಕೂಡಾ ಮೂರು ಪಕ್ಷದ ಅಭ್ಯರ್ಥಿಗಳು ಬೆಳಗ್ಗೆ 6 ಗಂಟೆಯಿಂದಲ್ಲೇ ಮತಪ್ರಚಾರದಲ್ಲಿ ತೊಡಗಿದ್ರು.
ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ಪರ, ನಟಿ ತಾರಾ ಚುನಾವಣಾ ಪ್ರಚಾರದಲ್ಲಿ ತೊಡಗಿದರು. ನಂದಿನಿ ಲೇಔಟ್ನ ನಾನಾ ವಾರ್ಡ್ಗಳಿಗೆ ತೆರಳಿ, ಗೋಪಾಲಯ್ಯಗೆ ಮತ ಹಾಕುವಂತೆ ಪ್ರಚಾರ ಮಾಡಿದರು. ಇನ್ನು ಜೆಡಿಎಸ್ ಅಭ್ಯರ್ಥಿ ಗಿರೀಶ್ ಕೆ ನಾಶಿ ಕೂಡ ವಿವಿಧ ವಾರ್ಡ್ಗಳಿಗೆ ತೆರಳಿ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು. ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಶಿವರಾಜು, ಮಹಾಲಕ್ಷ್ಮೀಪುರಂ ವಾರ್ಡ್ನ ವೀರಾಂಜನೇಯ ಸ್ವಾಮಿ ದೇವಸ್ಥಾನ ಹತ್ತಿರ. ಕಮಲಮ್ಮನಗುಂಡಿಯಿಂದ ಮತಯಾಚನೆ ಮಾಡಿದ್ರು.