ಕರ್ನಾಟಕ

karnataka

ETV Bharat / state

ಕಟ್ಟುನಿಟ್ಟಿನ ಕರ್ಫ್ಯೂ ನಡುವೆ ಮರೆಯಾದ 'ಸಿಡಿ' ಪ್ರಕರಣದ ತನಿಖೆ!

ಕೊರೊನಾ ಪಾಸಿಟಿವ್ ಬಂದು ಕಳೆದೆರಡು ವಾರಗಳ ಹಿಂದೆಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿಲ್ಲ. ವಾರದ ಹಿಂದೆಯೇ ಎಸ್ಐಟಿ ಮುಂದೆ ಜಾರಕಿಹೊಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೀಗ ಎಲ್ಲ ಅಧಿಕಾರಿಗಳು ಕೊರೊನಾ ಕರ್ಫ್ಯೂ ಕರ್ತವ್ಯದಲ್ಲಿ ಮಗ್ನರಾಗಿದ್ದಾರೆ.

By

Published : Apr 27, 2021, 8:34 PM IST

cd-case
'ಸಿಡಿ' ಪ್ರಕರಣ

ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಅಲೆಯ ನಿಯಂತ್ರಣಕ್ಕೆ 14 ದಿನಗಳ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ​ (​ಎ​ಸ್‌​ಐ​ಟಿ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆಯಾ? ಎನ್ನುವ ಪ್ರಶ್ನೆ ಮೂಡಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ತನಿಖೆಗೆ ತಾತ್ಕಾಲಿಕವಾಗಿ ಹಿನ್ನಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಕೊರೊನಾ ಪಾಸಿಟಿವ್ ಬಂದು ಕಳೆದ ಎರಡು ವಾರಗಳ ಹಿಂದೆಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೂ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿಲ್ಲ. ವಾರದ ಹಿಂದೆಯೇ ಎಸ್ಐಟಿ ಮುಂದೆ ಜಾರಕಿಹೊಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ಆರೋಗ್ಯ ಸಮಸ್ಯೆಯಿಂದಾಗಿ ವಿಚಾರಣೆಗೆ ಹಾಜರಾಗಿರಲಿಲ್ಲ.

ಈಗ ಎಲ್ಲ ಅಧಿಕಾರಿಗಳು ಕೊರೊನಾ ಕರ್ಫ್ಯೂ ಕರ್ತವ್ಯದಲ್ಲಿ ಮಗ್ನರಾಗಿದ್ದಾರೆ. ಪ್ರಕರಣ ಸಂಬಂಧ ತನಿಖೆಗೆ ಹೆಚ್ಚಿನ ಕಾಲಾವಕಾಶ ಬೇಕಿದ್ದು, ಹೆಚ್ಚೆಚ್ಚು ಸಾಕ್ಷ್ಯಾಧಾರ, ದಾಖಲೆಗಳನ್ನು ಸಂಗ್ರಹಿಸಬೇಕಿದೆ. ಆದರೆ, ಸಾಕಷ್ಟು ಅಧಿಕಾರಿಗಳು ಈ ಪ್ರಕರಣ ಸಂಬಂಧ ಆಸಕ್ತಿಯನ್ನು ತೋರುತ್ತಿಲ್ಲ. ಹೀಗಾಗಿ ತನಿಖೆ ಬೇಕಾಬಿಟ್ಟಿಯಾಗಿ ನಡೆಯುತ್ತಿದೆ ಎಂದು ಹೇಳಲಾಗ್ತಿದೆ.

ಪ್ರಕರಣದ ತನಿಖೆಯನ್ನು ನಿಧಾನಗೊಳಿಸುವಂತೆ ಸರ್ಕಾರದ ಮೇಲೂ ಸಾಕಷ್ಟು ಒತ್ತಡಗಳಿವೆ ಎಂದು ಹೆಸರು ಹೇಳಲಿಚ್ಛಿಸದ ಎಸ್ಐಟಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಶಂಕಿತ ವ್ಯಕ್ತಿಗಳನ್ನು ಹುಡುಕಲು ಎರಡು ತಂಡವನ್ನು ರಚನೆ ಮಾಡಲಾಗಿದೆ. ನರೇಶ್ ಗೌಡ ಹಾಗೂ ಶ್ರವಣ್ ಇಬ್ಬರೂ ಇನ್ನೂ ಪತ್ತೆಯಾಗಿಲ್ಲ. ಈ ಇಬ್ಬರನ್ನೂ ವಶಕ್ಕೆ ಪಡೆದ ನಂತರವಷ್ಟೇ ಮುಂದಿನ ತನಿಖೆ ಸುಲಭವಾಗಲಿದೆ ಎಂದಿದ್ದಾರೆ.

ವಿಡಿಯೋದಲ್ಲಿ ಕಂಡು ಬಂದಿರುವ ಯುವತಿ ನ್ಯಾಯಾಲಯದ ಮುಂದೆ ಎಸ್ಐಟಿ ವಿರುದ್ಧ ಸಾಕಷ್ಟು ಆರೋಪಗಳನ್ನು ಮಾಡಿದ್ದಾಳೆ. ಪ್ರಕರಣದ ತನಿಖೆ ಪ್ರಗತಿಯಲ್ಲಿರುವ ಕಾರಣ ನಾವು ಹೆಚ್ಚು ಮಾಹಿತಿಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಓದಿ:ರೆಮ್​ಡಿಸಿವಿರ್​, ಆ್ಯಕ್ಸಿಜನ್ ಕೊರತೆ ತೀವ್ರವಾಗಿದೆ : ಹೈಕೋರ್ಟ್​ಗೆ ಖಾಸಗಿ ಆಸ್ಪತ್ರೆಗಳ ಸಂಘದ ಮಾಹಿತಿ

ABOUT THE AUTHOR

...view details