ಕರ್ನಾಟಕ

karnataka

ETV Bharat / state

ಸಿಡಿ ಪ್ರಕರಣ; ರಮೇಶ್ ‌ಜಾರಕಿಹೊಳಿಗೆ ಎಸ್ಐಟಿ ನೋಟಿಸ್ - CD case of karnataka

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ‌ರಮೇಶ್ ಜಾರಕಿಹೊಳಿ‌ ಗೋಕಾಕಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಎರಡು ದಿನ ಚಿಕಿತ್ಸೆ ಪಡೆದಿದ್ದರು. ನಂತರ ಹೋಮ್ ಐಸೋಲೇಶನ್‌ನಲ್ಲಿದ್ದಾರೆ. ಇದಾದ ನಂತರ ಅವರ ಕೊರೊನಾ ಪರೀಕ್ಷೆಯ ವರದಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ..

CD case: SIT notice to Ramesh jarkiholi
ರಮೇಶ್ ‌ಜಾರಕಿಹೊಳಿಗೆ ಎಸ್ಐಟಿ ನೋಟಿಸ್

By

Published : Apr 16, 2021, 9:39 PM IST

Updated : Apr 17, 2021, 12:02 PM IST

ಬೆಂಗಳೂರು/ಬೆಳಗಾವಿ: ಸಿಡಿ ಪ್ರಕರಣದಡಿ ಮಾಜಿ ಸಚಿವ ರಮೇಶ್ ‌ಜಾರಕಿಹೊಳಿ ಅವರಿಗೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ.

ಏ.20ರಂದು ಸಂಜೆ 4ಕ್ಕೆ‌ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್​ನಲ್ಲಿ ಉಲ್ಲೇಖಿಸಿದ್ದಾರೆ. ಎಸ್ಐಟಿಯ ಇಬ್ಬರು ಅಧಿಕಾರಿಗಳು ಇಂದು ಗೋಕಾಕ್‌ಗೆ ಆಗಮಿಸಿ ರಮೇಶ್ ಜಾರಕಿಹೊಳಿ‌ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ.

ರಮೇಶ್ ಜಾರಕಿಹೊಳಿ‌ ಸಂಪರ್ಕ ಎಸ್ಐಟಿ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಹೀಗಾಗಿ, ರಮೇಶ್ ‌ಸಹೋದರ ಹಾಗೂ ಕೆಎಂಎಫ್ ‌ಅಧ್ಯಕ್ಷ ಬಾಲಚಂದ್ರ ‌ಜಾರಕಿಹೊಳಿ ಕಚೇರಿಗೆ ನೋಟಿಸ್ ತಲುಪಿಸಿ ಎಸ್ಐಟಿ ಅಧಿಕಾರಿಗಳು ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ‌ರಮೇಶ್ ಜಾರಕಿಹೊಳಿ‌ ಗೋಕಾಕಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಎರಡು ದಿನ ಚಿಕಿತ್ಸೆ ಪಡೆದಿದ್ದರು. ನಂತರ ಹೋಮ್ ಐಸೋಲೇಶನ್‌ನಲ್ಲಿದ್ದಾರೆ. ಇದಾದ ನಂತರ ಅವರ ಕೊರೊನಾ ಪರೀಕ್ಷೆಯ ವರದಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Last Updated : Apr 17, 2021, 12:02 PM IST

ABOUT THE AUTHOR

...view details