ಕರ್ನಾಟಕ

karnataka

ETV Bharat / state

ಸಕಲ ಪೊಲೀಸ್ ಗೌರವಗಳೊಂದಿಗೆ ಸಾಹಿತಿ ಚಂಪಾ ಅಂತ್ಯಕ್ರಿಯೆ: ಸಿಎಂ ಬಸವರಾಜ ಬೊಮ್ಮಾಯಿ - ಚಂದ್ರಶೇಖರ ಪಾಟೀಲ್ ನಿಧನ

‘ಚಂಪಾ’ ಎಂದೇ ಪ್ರಸಿದ್ಧರಾದ ಚಂದ್ರಶೇಖರ ಪಾಟೀಲ್ ಅವರ ಸ್ವತಂತ್ರ ಚಿಂತನೆಯ ಲೇಖನದಲ್ಲಿ ಮೊನಚು ಇರುತ್ತಿತ್ತು. ವಿಷಯವನ್ನು ಪ್ರತಿಪಾದಿಸುವ ರೀತಿ ಮತ್ತು ಪ್ರಸ್ತುತ ವಿಷಯಗಳ ಬಗ್ಗೆ ವಿಮರ್ಶಿಸಿ ವ್ಯವಸ್ಥೆಗೆ ಕನ್ನಡಿ ಹಿಡಿಯುವಂತಹ ಕೆಲಸ ಮಾಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Chandrashekhar Patil funeral
ಸಕಲ ಪೊಲೀಸ್ ಗೌರವಗಳೊಂದಿಗೆ ಸಾಹಿತಿ ಚಂಪಾ ಅಂತ್ಯಕ್ರಿಯೆ

By

Published : Jan 10, 2022, 12:38 PM IST

Updated : Jan 10, 2022, 1:06 PM IST

ಬೆಂಗಳೂರು:ಕನ್ನಡದ ಹಿರಿಯ ಸಾಹಿತಿ, ನಾಟಕಕಾರ ಪ್ರೊ. ಚಂದ್ರಶೇಖರ ಪಾಟೀಲ್ ಅವರು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಂಪಾ’ ಎಂದೇ ಪ್ರಸಿದ್ಧರಾದ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಸ್ವತಂತ್ರ ಚಿಂತನೆಯ ಲೇಖನದಲ್ಲಿ ಮೊನಚು ಇರುತ್ತಿತ್ತು. ವಿಷಯವನ್ನು ಪ್ರತಿಪಾದಿಸುವ ರೀತಿ ಮತ್ತು ಪ್ರಸ್ತುತ ವಿಷಯಗಳ ಬಗ್ಗೆ ವಿಮರ್ಶಿಸಿ ವ್ಯವಸ್ಥೆಗೆ ಕನ್ನಡಿ ಹಿಡಿಯುವಂತಹ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಇದನ್ನೂ ಓದಿ:ಕನ್ನಡದ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ್ ಪಾಟೀಲ್​ ನಿಧನ

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಚಂಪಾ ಅವರು ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಚಂದ್ರಶೇಖರ ಪಾಟೀಲ್ ಅವರು ತಮ್ಮ ಕುಟುಂಬಕ್ಕೆ ಅದರಲ್ಲಿಯೂ ತಮ್ಮ ತಂದೆಯವರಿಗೆ ಬಹಳ ಆತ್ಮೀಯರಾಗಿದ್ದರು. ನಮಗೆಲ್ಲ ಮಾರ್ಗದರ್ಶಕರಾಗಿದ್ದ ಚಂಪಾ ಇಂದು ನಮ್ಮನ್ನು ಅಗಲಿರುವುದು ಸಾಹಿತ್ಯ ಲೋಕಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದರು.

ಸರ್ಕಾರದ ಅಧಿಸೂಚನೆ

ಪ್ರೊ. ಚಂದ್ರಶೇಖರ ಪಾಟೀಲ್ ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ:ರಾಜ್ಯಾದ್ಯಂತ ಬೂಸ್ಟರ್ ಡೋಸ್ ಲಸಿಕಾಭಿಯಾನಕ್ಕೆ ಸಿಎಂ ಚಾಲನೆ: ಸ್ಪುಟ್ನಿಕ್ ಲಸಿಕೆ ಪಡೆದವರಿಗಿಲ್ಲ ಬೂಸ್ಟರ್ ಡೋಸ್

Last Updated : Jan 10, 2022, 1:06 PM IST

ABOUT THE AUTHOR

...view details