ಬೆಂಗಳೂರು:ಚಾಮರಾಜಪೇಟೆಯಲ್ಲಿ ನಡೆದ ಚಂದ್ರು ಕೊಲೆ ತನಿಖೆಯನ್ನು ಸಿಬಿಐಗೆ ಕೊಡಬೇಕು. ಸಿಐಡಿ ತನಿಖೆಯಿಂದ ಏನು ಉಪಯೋಗ ಆಗುತ್ತದೆ ಎಂಬುದು ನನಗಂತೂ ಗೊತ್ತಾಗುತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ಸ್ಥಳೀಯ ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.
ಈ ಸಂಬಂಧ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಸಿಐಡಿ ತನಿಖೆಯಿಂದ ಏನು ಉಪಯೋಗ ಆಗುತ್ತದೆ ಎಂಬುದು ನನಗಂತೂ ಗೊತ್ತಾಗುತ್ತಿಲ್ಲ. ಯಾಕೆಂದರೆ, ಅವರ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ, ವಕ್ತಾರ ರವಿಕುಮಾರ್ ಏನು ಹೇಳಿಕೆ ಕೊಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಕಮಲ್ ಪಂತ್ ಸುಳ್ಳು ಹೇಳುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಮೇಲೆಯೇ ಅವರು ಆರೋಪ ಮಾಡಿದ್ದಾರೆ. ತನಿಖೆ ಮಾಡುತ್ತಿದ್ದ ಪೊಲೀಸ್ ಇಲಾಖೆ ಮೇಲೆನೆ ಆರೋಪ ಮಾಡಿ, ಈಗ ಸಿಐಡಿಗೆ ತನಿಖೆ ಕೊಟ್ಟಿದ್ದಾರೆ.