ಬೆಂಗಳೂರು: ಕಾಂಗ್ರೆಸ್ನ 24 ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ಬೆಳಗ್ಗೆ 11.45ಕ್ಕೆ ರಾಜಭವನದಲ್ಲಿ ನಡೆಯಲಿದೆ. ಆದ್ದರಿಂದ ರಾಜಭವನದ ಸುತ್ತಮುತ್ತ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಚಾರ ಮಾರ್ಗಗಳಲ್ಲಿ ಬದಲಾವಣೆಯಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅನ್ವಯವಾಗುವಂತೆ ಕೆ ಆರ್ ವೃತ್ತದಿಂದ ಗೋಪಾಲಗೌಡ ವೃತ್ತದವರೆಗೆ ಸಂಚಾರ ವ್ಯವಸ್ಥೆ ಬಂದ್ ಆಗಲಿದೆ. ಬದಲಿಯಾಗಿ ನೃಪತುಂಗ ರಸ್ತೆ ಅಥವಾ ಕಬ್ಬನ್ಪಾರ್ಕ್ ಒಳಭಾಗದ ರಸ್ತೆಯಲ್ಲಿ ಸಂಚಾರಿಸಬಹುದಾಗಿದೆ. ಇನ್ನು ಬಾಳೇಕುಂದ್ರಿ ವೃತ್ತದಿಂದ ಬರುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಕಾಫಿ ಬೋರ್ಡ್ ಅಥವಾ ತಿಮ್ಮಯ್ಯ ವೃತ್ತದ ಕಡೆ ಸಂಚಾರ ನಿರ್ಬಂಧ ಹೇರಲಾಗಿದೆ.
ಇದನ್ನೂ ಓದಿ :ಲಕ್ಷ್ಮೀ ಹೆಬ್ಬಾಳ್ಕರ್ಗೆ ಒಲಿದ ಸಚಿವ ಸ್ಥಾನಬ : ಸವದಿ, ಅಶೋಕ್ ಪಟ್ಟಣ ಸೇರಿ ಇತರರಿಗೆ ನಿರಾಶೆ
ಜೊತೆಗೆ, ಪೊಲೀಸ್ ತಿಮ್ಮಯ್ಯ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಹಾಗೆಯೇ ಶಿವಾಜಿನಗರ ಬಸ್ ನಿಲ್ದಾಣದಿಂದ ಬರುವ ವಾಹನಗಳ ಹಾಗೂ ಕ್ವೀನ್ಸ್ ಸರ್ಕಲ್, ಸಿದ್ದಲಿಂಗಯ್ಯ ವೃತ್ತದ ಕಡೆಗೆ ಬರುವ ವಾಹನಗಳ ಮಾರ್ಗ ಬದಲಾಯಿಸಲಾಗಿದೆ. ಎಲ್ಲಾ ಮಾದರಿ ಬಸ್ಗಳು, ಸರಕು ಸಾಗಣೆ ವಾಹನಗಳ ಸಂಚಾರವನ್ನ ರಾಜಭವನ, ಕಾಫಿಬೋರ್ಡ್ ಕಡೆಗೆ ನಿಷೇಧಿಸಲಾಗಿದೆ. ರಾಜಭವನದ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸಂಪೂರ್ಣ ನಿಷೇಧಿಸಲಾಗಿದೆ. ರಾಜಭವನ ರಸ್ತೆ, ಅಂಬೇಡ್ಕರ್ ರಸ್ತೆ, ಕ್ವೀನ್ಸ್ ರಸ್ತೆ, ಇನ್ಫೆಂಟ್ರಿ ರಸ್ತೆ, ಸ್ಯಾಂಕಿ ರಸ್ತೆ, ಪ್ಯಾಲೇಸ್ ರಸ್ತೆ, ಕಬ್ಬನ್ ರಸ್ತೆಯಲ್ಲಿ ನಿಲುಗಡೆ ನಿಷೇಧಿಸಲಾಗಿದೆ.
ಇದನ್ನೂ ಓದಿ :24 ಶಾಸಕರಿಗೆ ಮಂತ್ರಿ ಭಾಗ್ಯ... ರಾಜಭವನದಲ್ಲಿ ಇಂದು ಪ್ರಮಾಣವಚನ ಸ್ವೀಕಾರ