ಬೆಂಗಳೂರು: ನಗರದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲು ಮಾಡಲಾಗಿತ್ತು. ನಂತರ ಒಂದು ಕೇಸ್ ಠಾಣೆ ವ್ಯಾಪ್ತಿಯ ಕಾರಣಕ್ಕೆ ಹೆಚ್ಎಸ್ಆರ್ ಲೇಔಟ್ಗೆ ವರ್ಗಾವಣೆ ಮಾಡಲಾಗಿತ್ತು. ಈ ಎರಡು ಕೇಸ್ಗಳ ತನಿಖೆಯನ್ನು ಸಿಸಿಬಿ ನಡೆಸುತ್ತಿದ್ದು, ಎರಡು ಪ್ರತ್ಯೇಕ ಪ್ರಕರಣಗಳ ಪೈಕಿ ಒಂದು ಕೇಸ್ ಮೇಲೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಒಂದನೇ ಎಸಿಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಪ್ರಕರಣದ ತನಿಖೆಯನ್ನು ಸಿಸಿಬಿ ಇನ್ಸ್ಪೆಕ್ಟರ್ ಶ್ರೀಧರ್ ಪೂಜಾರ್ ನಡೆಸುತ್ತಿದ್ದು, ಕೇಸ್ನಲ್ಲಿ ಒಟ್ಟು ಮೂವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು, ರೋಹಿತ್ ಮತ್ತು ನೇತ್ರಾವತಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಮೂವರು ಸೇರಿ ಹಣ ಪಡೆದು ಬೆಡ್ ಬ್ಲಾಕ್ ಮಾಡಿಸಿ ಕೊಟ್ಟಿದ್ದರು ಎಂಬುದು ತನಿಖೆಯಲ್ಲಿ ದೃಢವಾಗಿದೆ. ಇದಲ್ಲದೇ ತನಿಖೆಯಲ್ಲಿ ಮೂವರು ರೋಗಿಗಳಿಂದ ಹಣ ಪಡೆದು ಬೆಡ್ ಕೊಡಿಸಿರುವುದಕ್ಕೆ ಸಾಕ್ಷ್ಯ ಕೂಡ ಲಭ್ಯವಾಗಿದೆ. ಆನ್ಲೈನ್ ಟ್ರಾನ್ಸಾಕ್ಷನ್ಗಳಾದ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಕೂಡ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.