ಬೆಂಗಳೂರು: ಹಸಿರು ವಲಯದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಲೇಔಟ್ ಅನ್ನು ಜಿಲ್ಲಾಧಿಕಾರಿ ಶಿವಮೂರ್ತಿ ಹಾಗೂ ತಹಶಿಲ್ದಾರ್ ತೇಜಸ್ಕುಮಾರ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಬೆಂಗಳೂರು ಪೂರ್ವ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದ ಸರ್ವೆ ನಂ.137 ರಲ್ಲಿ 5 ಎಕರೆ.4 ಗುಂಟೆ ಹಸಿರು ವಲಯದ ಭೂಮಿಯಲ್ಲಿ ಹಾಗೂ ಮೇಡಹಳ್ಳಿ ಗ್ರಾಮದ ಸರ್ವೆ ನಂಬರ್ 89ರ 2ಎಕರೆ ಪ್ರದೇಶದಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ಬಡಾವಣೆಗಳನ್ನು ತೆರವುಗೊಳಿಸಿ, ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಮೂರ್ತಿ ತಿಳಿಸಿದರು.