ಕರ್ನಾಟಕ

karnataka

ETV Bharat / state

ಕೇಶವಕೃಪಾಕ್ಕೆ ದೌಡಾಯಿಸಿದ ಸಿಎಂ: ಸಂಘ ಪರಿವಾರದ ಪ್ರಮುಖರ ಜೊತೆ ಬಿಜೆಪಿ ನಾಯಕರ ಸಭೆ..! - ಈಟಿವಿ ಭಾರತ ಕನ್ನಡ

ಚಾಮರಾಜಪೇಟೆಯಲ್ಲಿರುವ ಆರ್​ಎಸ್​ಎಸ್ ಕಚೇರಿ ಕೇಶವಕೃಪಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು ದಿಢೀರ್​ ಭೇಟಿ ನೀಡಿ ಸಂಘ ಪರಿವಾರದ ಹಿರಿಯ ನಾಯಕರ ಜೊತೆ ಸಭೆ ನಡೆಸಿದರು.

KN_BNG
ಕೇಶವಶಿಲ್ಪಕ್ಕೆ ಭೇಟಿ ನೀಡಿದ ಸಿಎಂ

By

Published : Nov 24, 2022, 9:20 PM IST

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಸಿದ್ದತೆ ಆರಂಭಿಸಿರುವ ಬಿಜೆಪಿ ನಾಯಕರು ಜನ ಸ್ಪಂಧನ ಯಾತ್ರೆ ನಡುವೆಯೇ ಆರ್​ಎಸ್​ಎಸ್​ ಕಚೇರಿಗೆ ದಿಢೀರ್ ಭೇಟಿ ನೀಡಿ ಸಂಘ ಪರಿವಾರದ ಪ್ರಮುಖರ ಜೊತೆ ಮಹತ್ವದ ಸಭೆ ನಡೆಸಿದರು.

ನಗರದ ಚಾಮರಾಜಪೇಟೆಯಲ್ಲಿರುವ ಆರ್​ಎಸ್​ಎಸ್ ಕಚೇರಿ ಕೇಶವ ಶಿಲ್ಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಡಾ.ಅಶ್ವಥ್ ನಾರಾಯಣ, ಡಾ. ಕೆ.ಸುಧಾಕರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಭೇಟಿ ನೀಡಿ ಸಂಘ ಪರಿವಾರದ ಹಿರಿಯ ನಾಯಕರ ಜೊತೆ ಸಭೆ ನಡೆಸಿದರು.

ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಲಾಯಿತು ಎನ್ನಲಾಗಿದೆ. ಮಹಾರಾಷ್ಟ್ರ ಗಡಿ ವಿವಾದ, ಮಂಗಳೂರು ಬಾಂಬ್ ಸ್ಪೋಟದ ವಿಷಯಗಳು ಅನೌಪಚಾರಿಕವಾಗಿ ಚರ್ಚೆಗೆ ಬಂದಿದ್ದವು ಎನ್ನಲಾಗಿದೆ. ಹೈಕಮಾಂಡ್ ನಿಂದ ಇತ್ತೀಚೆಗೆ ರಾಜ್ಯದ ನಾಯಕರಿಗೆ ಚುನಾವಣಾ ಸಿದ್ದತೆ ಕುರಿತು ಸಂದೇಶ ಬಂದಿದ್ದ ಬೆನ್ನಲ್ಲೇ ಈ ಸಭೆ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.

ಸಂಘ ಪರಿವಾರದ ನಾಯಕರ ಸಲಹೆ ಸ್ವೀಕರಿಸಿದ ಬಿಜೆಪಿ ನಾಯಕರು ರಾಜ್ಯ ಪ್ರವಾಸದ ವೇಳೆ ಅವುಗಳ ಅನುಷ್ಠಾನಕ್ಕೆ ತರುವ ಭರವಸೆ ನೀಡಿದರು ಎನ್ನಲಾಗಿದೆ.

ಸಂತೋಷ್ ವಿಷಯ ಚರ್ಚೆ?:ಇನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ತೆಲಂಗಾಣದಲ್ಲಿ ಸಂಕಷ್ಟ ಎದುರಾಗಿದ್ದು, ವಿಶೇಷ ತನಿಖಾ ತಂಡದಿಂದ ಬಂಧನಕ್ಕೊಳಗಾಗುವ ಸಾಧ್ಯತೆ ಇದೆ, ಶಾಸಕರ ಖರೀದಿ ಆರೋಪ ಕುರಿತು ವಿಚಾರಣೆಗೆ ಆಗಮಿಸುವಂತೆ ಎಸ್ಐಟಿ ನೋಟಿಸ್ ನೀಡಿದೆ. ಈ ವಿಚಾರದ ಕುರಿತು ಮಾತುಕತೆ ನಡೆದಿರಬಹುದು ಎನ್ನಲಾಗಿದೆ. ಆದರೆ, ಈ ವಿಷಯದ ಬಗ್ಗೆ ಬಿಜೆಪಿ ನಾಯಕರು ಯಾವ ಮಾಹಿತಿಯನ್ನೂ ನೀಡಿಲ್ಲ.

ಇದನ್ನೂ ಓದಿ:ಸಚಿವ ಸುಧಾಕರ್​​ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಕೋರ್ಟ್​ ಆದೇಶ

ABOUT THE AUTHOR

...view details