ಬೆಂಗಳೂರು :ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿರುವ ಸಾಧನೆಯ ಕಿರು ಹೊತ್ತಿಗೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲ್ಲಿಕೆ ಮಾಡಿದ್ದು, ಸರ್ಕಾರದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿರುವ ಸಾಧನೆಯ ಕಿರು ಹೊತ್ತಿಗೆಯನ್ನು ನೀಡಿ ಅದರ ಸಾರಾಂಶವನ್ನು ಅಮಿತ್ ಶಾ ಅವರಿಗೆ ವಿವರಣೆ ನೀಡಿದರು.