ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಾಸಕ ಮಂಜುನಾಥ್ ಅವರ ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿ ಆಗಿದೆ. ಅದಕ್ಕೆ ಹಣ ಹೆಚ್ಚು ಬಿಡುಗಡೆ ಮಾಡಬೇಕು ಎಂದು ಕೇಳಿದರು. ಶಾಸಕ ಮಂಜುನಾಥ್ ಅವರನ್ನು ಕುಮಾರಸ್ವಾಮಿ ಕರೆದುಕೊಂಡು ಬಂದಿದ್ದರು. ಅರ್ಧಗಂಟೆ ಅದರ ಬಗ್ಗೆ ಚರ್ಚೆ ಮಾಡಿ ಕಳಿಸಿದ್ದೇನೆ ಎಂದರು. ಇದರಲ್ಲಿ ಯಾವುದೇ ರಾಜಕೀಯ ಭೇಟಿ ಇರಲಿಲ್ಲ. ಕೇವಲ ಅವರ ಕ್ಷೇತ್ರದ ಬಗ್ಗೆ ಚರ್ಚೆ ಮಾಡಿದ್ದು ಅಷ್ಟೇ ಎಂದು ತಿಳಿಸಿದರು.