ಕರ್ನಾಟಕ

karnataka

By

Published : Mar 23, 2021, 11:37 AM IST

ETV Bharat / state

ಕಾಂಗ್ರೆಸ್ ಕುಂಟು ನೆಪ ಹೇಳಿ ಪ್ರತಿಭಟನೆ ಮಾಡುತ್ತಿದೆ: ಸಿಎಂ ಆಕ್ರೋಶ

ಕಾಂಗ್ರೆಸ್ ಸದಸ್ಯರು ಕುಂಟು ನೆಪ ಹೇಳಿ ಪ್ರತಿಭಟನೆ ಮಾಡ್ತಿದ್ದಾರೆ ಎಂದು ವಿಧಾನಸೌಧದಲ್ಲಿ ಸಿಎಂ ಬಿ.ಎಸ್​ ಯಡಿಯೂರಪ್ಪ ಹೇಳಿದರು.

CM BSY
ಸಿಎಂ ಬಿ.ಎಸ್​ ಯಡಿಯೂರಪ್ಪ

ಬೆಂಗಳೂರು: ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಕುಂಟು ನೆಪ ಹೇಳಿ ಪ್ರತಿಭಟನೆ ಮಾಡ್ತಿದ್ದಾರೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಕಿಡಿ ಕಾರಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೋಳಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ತನಿಖೆ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಬೇರೆ ವಿಚಾರ ಸಿಗದೇ ಇರೋದರಿಂದ ಧರಣಿ ನಡೆಸುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಸಿಎಂ ಪ್ರಶ್ನಿಸಿದರು.

ಇದನ್ನು ಓದಿ: 'ಪಾವ್ರಿ ಹೋ ರಹಿ ಹೈ'.. ಟ್ರೆಂಡಿಂಗ್​ ವಿಡಿಯೋಗೆ ಬಿಜೆಪಿ ಶಾಸಕ ಸಾಥ್​..!

ನಿಮ್ಮೆಲ್ಲರ ಮಾತು ಕೇಳಿದ್ದೀನಿ. ಸುಸೂತ್ರವಾಗಿ ಕಲಾಪ ನಡೆಸಲು ಬಿಡಿ ಅಂತ ಕಾಂಗ್ರೆಸ್ ಸದಸ್ಯರಿಗೆ ಮನವಿ ಮಾಡುತ್ತೇನೆ. ಆ ಹೆಣ್ಣುಮಗಳು ಸಿಗುತ್ತಿಲ್ಲ. ಸಿಕ್ಕಿದ್ದರೆ ಪ್ರಕರಣಕ್ಕೆ ಒಂದು ಅಂತ್ಯ ದೊರೆಯಲಿದೆ‌ ಎಂದರು.

ABOUT THE AUTHOR

...view details