ಬೆಂಗಳೂರು: ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಕುಂಟು ನೆಪ ಹೇಳಿ ಪ್ರತಿಭಟನೆ ಮಾಡ್ತಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಕಿಡಿ ಕಾರಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೋಳಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ತನಿಖೆ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಬೇರೆ ವಿಚಾರ ಸಿಗದೇ ಇರೋದರಿಂದ ಧರಣಿ ನಡೆಸುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಸಿಎಂ ಪ್ರಶ್ನಿಸಿದರು.