ಕರ್ನಾಟಕ

karnataka

ETV Bharat / state

ಕೋವಿಡ್​ನಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ರೂ. ಪರಿಹಾರ: ಸಿಎಂ ಘೋಷಣೆ

ಕೊರೊನಾದಿಂದ ಬಿಪಿಎಲ್ ಕುಟುಂಬದಲ್ಲಿ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ, ಅಂತಹ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 250 ರಿಂದ 300 ಕೋಟಿ ರೂ. ವಿನಿಯೋಗಿಸಲಾಗುತ್ತದೆ ಎಂದು ಸಿಎಂ ಹೇಳಿದರು.

By

Published : Jun 14, 2021, 1:43 PM IST

Updated : Jun 14, 2021, 1:50 PM IST

CM BSY Press meet at Bengaluru
ಸಿಎಂ ಬಿಎಸ್​ವೈ ಸುದ್ದಿಗೋಷ್ಠಿ

ಬೆಂಗಳೂರು:ಕೋವಿಡ್​ ಸೋಂಕಿನಿಂದ ಮನೆಗೆ ಆಧಾರವಾಗಿದ್ದ ವ್ಯಕ್ತಿಯನ್ನು ಕಳೆದುಕೊಂಡಿರುವ ಬಿಪಿಎಲ್​​ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಬಿ.ಎಸ್​ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೊರೊನಾ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಕೆಲ ಕುಟುಂಬಗಳು ಬೀದಿಪಾಲಾಗಿವೆ. ಇದನ್ನು ಮನಗಂಡು ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ವಯಸ್ಕರು ಅಥವಾ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ, ಅಂತಹ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 250 ರಿಂದ 300 ಕೋಟಿ ರೂ. ವಿನಿಯೋಗಿಸಲಾಗುತ್ತದೆ ಎಂದು ಸಿಎಂ ಹೇಳಿದರು.

ಹಾಲು ಕಲಬೆರಕೆಯ ಸಿಐಡಿ ತನಿಖೆ:ಮಂಡ್ಯ ಹಾಲು ಒಕ್ಕೂಟದಲ್ಲಿ ಹಾಲಿಗೆ ಕಲಬೆರಕೆ ಮಾಡಿದ್ದ ಸುದ್ದಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಘಟನೆಗೆ ಸಂಬಂಧಪಟ್ಟಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಮನ್​​ಮುಲ್​​ಗೆ ಹೊಸ ಎಂಡಿಯನ್ನು ನೇಮಕ ಮಾಡಲಾಗಿದೆ. ಪ್ರಕರಣದ ಸಿಐಡಿ ತನಿಖೆ ನಡೆಸುವುದಾಗಿ ತಿಳಿಸಿದರು.

ವಿಜಯ್ ನಿಧನಕ್ಕೆ ಸಂತಾಪ: ಇದೇ ವೇಳೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸ್ಯಾಂಡಲ್​ವುಡ್​ ನಟ ಸಂಚಾರಿ ವಿಜಯ್​ ಅಗಲಿಕೆಗೆ ಸಿಎಂ ಬಿಎಸ್​ವೈ ಸಂತಾಪ ಸೂಚಿಸಿದರು. ವಿಜಯ್‌ ಕುಟುಂಬಕ್ಕೆ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದರು.

ರಾಜ್ಯದ ಅರ್ಥಿಕ ಪರಿಸ್ಥಿತಿ ಬಗ್ಗೆ ಮಾತನಾಡುತ್ತಾ, ಆರ್ಥಿಕ ಪರಿಸ್ಥಿತಿ ಇರುವುದರಲ್ಲೇ ಉತ್ತಮವಾಗಿದೆ. ಹಾಗಾಗಿ, ದೇಶದಲ್ಲೇ ಮೊದಲ ಬಾರಿಗೆ ಕೋವಿಡ್​ನಿಂದ ವಯಸ್ಕರು ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಲು ಮುಂದಾಗಿದ್ದೇವೆ ಎಂದು ಅವರು ಹೇಳಿದರು.

ಇದನ್ನೂಓದಿ: ಇಹಲೋಕದ 'ಸಂಚಾರ' ನಿಲ್ಲಿಸಿದ ವಿಜಯ್: ಕಂಬನಿ ಮಿಡಿದ ಕಿಚ್ಚ ಸುದೀಪ್‌

Last Updated : Jun 14, 2021, 1:50 PM IST

ABOUT THE AUTHOR

...view details