ಕರ್ನಾಟಕ

karnataka

By

Published : Mar 24, 2020, 10:30 AM IST

ETV Bharat / state

ಮುಂದಿನ 8 ದಿನ ಎಲ್ಲವನ್ನೂ ಸಹಿಸಿಕೊಳ್ಳೋದು ಅನಿವಾರ್ಯ: ಸಿಎಂ ಬಿಎಸ್​ವೈ

ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದ್ದು, ಮಾರ್ಚ್ 31ರವರೆಗೆ ಕರ್ನಾಟಕ ಲಾಕ್​​​​ಡೌನ್ ಆಗಲಿದೆ. ಈ ಎಂಟು ದಿನ ಎಲ್ಲವನ್ನೂ ಸಹಿಸಿಕೊಳ್ಳಬೇಕಿರುವುದು ಅನಿವಾರ್ಯ ಎಂದು ಸಿಎಂ ಯಡಿಯೂರಪ್ಪ ಸಾರ್ವಜನಿಕರಿಗೆ ತಿಳಿಸಿದ್ದಾರೆ.

cm bsy statement about curfew
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಕೊವಿಡ್ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ, ಸಂಪೂರ್ಣವಾಗಿ ಕರ್ನಾಟಕವನ್ನೇ ಲಾಕ್​​​ಡೌನ್ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿನ್ನೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ.

ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ, 9 ಜಿಲ್ಲೆಗಳಿಗೆ ಅನ್ವಯಿಸಿ ಹೊರಡಿಸಿದ್ದ ಲಾಕ್​​ಡೌನ್ ಆದೇಶವನ್ನು, ಸಂಪೂರ್ಣ ರಾಜ್ಯಾದ್ಯಂತ ವಿಸ್ತರಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಹಾಗಾಗಿ, ಮುಂದಿನ 8 ದಿನಗಳ ಕಾಲ ವಿಧಿಸಲಾದ ನಿಯಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಲೇಬೇಕಿದೆ ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details