ಬೆಂಗಳೂರು:ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಲಾಕ್ಡೌನ್ ವಿಸ್ತರಣೆ ಮತ್ತು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.
ಸುದ್ದಿಗೋಷ್ಠಿಗೂ ಮುನ್ನ ಸಿಎಂ ಹಿರಿಯ ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಮೇ 24ರಿಂದ 31ರವರೆಗೆ ಲಾಕ್ಡೌನ್ ವಿಸ್ತರಿಸುವ ಸಾಧ್ಯತೆ ಹೆಚ್ಚಿದೆ. ಅದರ ಜೊತೆಗೆ ವಿಶೇಷ ಪ್ಯಾಕೇಜ್ ಘೋಷಿಸಲು ಪ್ರತಿಪಕ್ಷ, ಸಾರ್ವಜನಿಕರಿಂದ ಸಾಕಷ್ಟು ಒತ್ತಡ ಬರುತ್ತಿದೆ. ಹೀಗಾಗಿ ಈ ಬಗ್ಗೆಯೂ ಕಾರ್ಮಿಕರು ಹಾಗೂ ಬಡ ವರ್ಗದವರಿಗೆ ಪರಿಹಾರ ಘೋಷಿಸುವ ಸಾಧ್ಯತೆಯೂ ಇದೆ.