ಕರ್ನಾಟಕ

karnataka

ETV Bharat / state

ಸಂತೋಷ್ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಬಿಎಸ್​ವೈ

ಇತ್ತೀಚಿಗೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಎನ್​.ಆರ್​ ಸಂತೋಷ್​ ನಿವಾಸಕ್ಕೆ ಸಿಎಂ ಭೇಟಿ ನೀಡಿ ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

By

Published : Dec 3, 2020, 6:21 PM IST

Updated : Dec 3, 2020, 7:55 PM IST

ಸಂತೋಷ್ ನಿವಾಸಕ್ಕೆ ಸಿಎಂ ಭೇಟಿ
ಸಂತೋಷ್ ನಿವಾಸಕ್ಕೆ ಸಿಎಂ ಭೇಟಿ

ಬೆಂಗಳೂರು: ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ನಿವಾಸಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಭೇಟಿ ನೀಡಿದ್ದಾರೆ.

ಸಂತೋಷ್ ನಿವಾಸಕ್ಕೆ ಸಿಎಂ ಭೇಟಿ

ಡಾಲರ್ಸ್ ಕಾಲೋನಿಯಲ್ಲಿರುವ ಎನ್‌.ಆರ್ ಸಂತೋಷ್ ನಿವಾಸಕ್ಕೆ ಭೇಟಿ ನೀಡಿದ ಅವರು ಆರೋಗ್ಯ ವಿಚಾರಿಸಿದರು. ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದ ಬಳಿಕ ತೆರಳಿದರು.

ಇದನ್ನು ಓದಿ:ಸಂತೋಷ್ ವಿರುದ್ಧ ಎಫ್​ಐಆರ್​: ಸಿಎಂಗೆ ಶುರುವಾಗುತ್ತಾ ಪೀಕಲಾಟ ..?

ಈ ಹಿಂದೆ ಸಿಎಂ ಯಡಿಯೂರಪ್ಪ ಅವರು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸಿಎಂ ಮತ್ತೆ ಡಾಲರ್ಸ್ ಕಾಲೊನಿಯ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

Last Updated : Dec 3, 2020, 7:55 PM IST

ABOUT THE AUTHOR

...view details