ಕರ್ನಾಟಕ

karnataka

ETV Bharat / state

ಸಿಎಂ ತುರ್ತು ವಿಡಿಯೋ ಕಾನ್ಫರೆನ್ಸ್: ಲಾಕ್​​ಡೌನ್ ಉಲ್ಲಂಘಿಸಿದವರನ್ನು ಬಂಧಿಸಲು ಖಡಕ್​​ ಸೂಚನೆ - ಲಾಕ್​​ಡೌನ್ ಉಲ್ಲಂಘಿಸಿದವರನ್ನು ಬಂಧಿಸಲು ಖಡಕ್ ಸೂಚನೆ

ಸಿಎಂ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ‌ ಆರೋಗ್ಯಾಧಿಕಾರಿಗಳ ಜೊತೆ ತುರ್ತು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ರು. ಈ ಸಭೆಯಲ್ಲಿ ಕೊರೊನಾ ಸ್ಥಿತಿಗತಿ, ಕ್ರಮಗಳು, ಲಾಕ್​​ಡೌನ್ ಪರಿಸ್ಥಿತಿ, ಅಗತ್ಯ ವಸ್ತುಗಳ ಪೂರೈಕೆ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ್ರು.

CM Emergency Video Conference
ಸಿಎಂ ತುರ್ತು ವಿಡಿಯೋ ಕಾನ್ಫರೆನ್ಸ್

By

Published : Mar 26, 2020, 6:04 PM IST

ಬೆಂಗಳೂರು:ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ‌ ಆರೋಗ್ಯಾಧಿಕಾರಿಗಳ ಜೊತೆ ತುರ್ತು ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಕೊರೊನಾ ಸ್ಥಿತಿಗತಿ, ಕ್ರಮಗಳು, ಲಾಕ್​​ಡೌನ್ ಪರಿಸ್ಥಿತಿ, ಅಗತ್ಯ ವಸ್ತುಗಳ ಪೂರೈಕೆ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು, ಹಲವು ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ರಧಾನಮಂತ್ರಿ‌ ಅವರ ಸೂಚನೆಯಂತೆ 21 ದಿನಗಳ ಲಾಕ್​​ಡೌನ್​​ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಅಂತ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ‌ ನೀಡಿದ್ರು. ಲಾಕ್​​ಡೌನ್ ಮೀರಿ ಹೊರ‌ಬರುವವರನ್ನು ಅರೆಸ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಎಲ್ಲಾ ಜಿಲ್ಲೆಯ ಗಡಿಗಳನ್ನು ಸೀಲ್ ಮಾಡುವಂತೆ ಸೂಚನೆ ನೀಡಿದ್ದಾರೆ.

ಸಿಎಂ ತುರ್ತು ವಿಡಿಯೋ ಕಾನ್ಫರೆನ್ಸ್

ವಿಶೇಷವಾಗಿ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ಇಡುವಂತೆ ಸೂಚಿಸಿದ್ದಾರೆ. ಇಡೀ ರಾಜ್ಯದಲ್ಲಿ ಖಾಸಗಿ ಕ್ಲಿನಿಕ್​​ಗಳು ಬಂದ್ ಮಾಡುವ ಹಾಗಿಲ್ಲ. ಕ್ಲಿನಿಕ್ ಬಂದ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ದಿನನಿತ್ಯ ಬಳಸುವ ವಸ್ತುಗಳನ್ನು ಹೆಚ್ಚಿನ‌ ಬೆಲೆಗೆ ಮಾರಾಟ ಮಾಡುವುದು ಕಂಡುಬಂದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಅದೇ ಏರಿಯಾದಲ್ಲಿ ಮಾತ್ರ ಓಡಾಡಲು ಅವಕಾಶ ಕೊಡಿ. ಬೇರೆ ಏರಿಯಕ್ಕೆ ಹೋಗಿ ಖರೀದಿ ಮಾಡಲು ಅವಕಾಶ ನೀಡದಂತೆ ನಿರ್ದೇಶನ ನೀಡಿದರು. ಜೊತೆಗೆ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 50 ಬೆಡ್​​ಗಳನ್ನು ಕೋವಿಡ್-19 ರೋಗಿಗಳಿಗಾಗಿ‌ ಮೀಸಲಿಡುವಂತೆ ಸೂಚಿಸಿದ್ದಾರೆ.

ಇನ್ನು ವೈದ್ಯರು ಮತ್ತು ನರ್ಸ್​ಗಳಿಗೆ ತೊಂದರೆ ಕೊಡುವ ಮನೆ ಮಾಲೀಕರಿಗೆ ಎಚ್ಚರಿಕೆ ನೀಡಬೇಕು ಎಂದು ಇದೇ ವೇಳೆ ಸ್ಪಷ್ಟಪಡಿಸಿದರು. ವಿಡಿಯೋ ಕಾನ್ಫರೆನ್ಸ್​​ನಲ್ಲಿ ಡಿಸಿಎಂಗಳಾದ ಅಶ್ವತ್ಥ್​​ ನಾರಾಯಣ್​​, ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸಚಿವರಾದ ಅಶೋಕ್, ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ABOUT THE AUTHOR

...view details