ಕರ್ನಾಟಕ

karnataka

ETV Bharat / state

ತುಳಿತಕ್ಕೊಳಗಾದವರಿಗೆ ನ್ಯಾಯ ಕೊಡುವ ಕೆಲಸ.. ಮತ್ತೆ ಮೀಸಲಾತಿ ಹೆಚ್ಚಳದ ಸುಳಿವು ನೀಡಿದ್ರಾ ಸಿಎಂ? - ಅವಕಾಶ ವಂಚಿತರಿಗೆ ನ್ಯಾಯ ಕೊಡಬೇಕು

ಹತ್ತು ಹಲವಾರು ಸರ್ಕಾರಗಳು ಬಂದು ಹೋದರೂ ಇದಕ್ಕೆ ನಿರ್ಣಯ ಕೈಗೊಳ್ಳಲು ಆಗಿರಲಿಲ್ಲ, ಇದಕ್ಕೆ ಹಲವಾರು ಕಾರಣಗಳೂ ಇವೆ. ಕಾನೂನಾತ್ಮಕ ಕಾರಣ ಇದೆ. ಹಾಗಾಗಿ ಯಾರನ್ನೂ ದೂಷಿಸಲ್ಲ, ಆದರೆ ಇದಕ್ಕೆ ರಾಜಕೀಯ ಇಚ್ಛಾಶಕ್ತಿಯ ಅವಶ್ಯಕತೆಯೂ ಇತ್ತು. ಅದನ್ನು ನಾವು ಮಾಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Chief Minister Basavaraja Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Oct 17, 2022, 6:25 PM IST

Updated : Oct 17, 2022, 7:17 PM IST

ಬೆಂಗಳೂರು: ತುಳಿತಕ್ಕೊಳಗಾದರಿಗೆ, ಅವಕಾಶ ವಂಚಿತರಿಗೆ ನ್ಯಾಯ ಕೊಡಬೇಕು ಎನ್ನುವ ಕಾರಣಕ್ಕೆ ಕಳಕಳಿಯಿಂದ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಿಸಿದ್ದು, ಹತ್ತು ಹಲವು ಸಮುದಾಯದಲ್ಲಿ ಅವಕಾಶ ವಂಚಿತರಿದ್ದಾರೆ. ಅವರಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದು ಮತ್ತಷ್ಟು ಸಮಯದಾಯದ ಮೀಸಲಾತಿ ಹೆಚ್ಚಳದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿರುವುದಕ್ಕೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಎಸ್ಸಿ ಎಸ್ಟಿ ಸಮುದಾಯದ ಮುಖಂಡರು ಇಂದು ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಎಂ, ಎಸ್ಸಿ ಎಸ್ಟಿ ಸಮುದಾಯಕ್ಕೆ ನಾವು ಮೀಸಲಾತಿ ಹೆಚ್ಚಿಸಿದ್ದೇವೆ. ಇದು ಐತಿಹಾಸಿಕ ನಿರ್ಣಯವಾಗಿದೆ, ಕಳೆದ 50 ವರ್ಷಗಳಿಂದ ಮೀಸಲಾತಿ ಹೆಚ್ಚಿಸಬೇಕು ಎನ್ನುವ ಬೇಡಿಕೆ ಇತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹತ್ತು ಹಲವಾರು ಸರ್ಕಾರಗಳು ಬಂದು ಹೋದರೂ ಇದಕ್ಕೆ ನಿರ್ಣಯ ಕೈಗೊಳ್ಳಲು ಆಗಿರಲಿಲ್ಲ, ಇದಕ್ಕೆ ಹಲವಾರು ಕಾರಣಗಳೂ ಇವೆ. ಕಾನೂನಾತ್ಮಕ ಕಾರಣ ಇದೆ ಹಾಗಾಗಿ ಯಾರನ್ನೂ ದೂಷಿಸಲ್ಲ, ಆದರೆ ಇದಕ್ಕೆ ರಾಜಕೀಯ ಇಚ್ಛಾ ಶಕ್ತಿಯ ಅವಶ್ಯಕತೆಯೂ ಇತ್ತು ಅದನ್ನು ನಾವು ಮಾಡಿದ್ದೇವೆ. ಇದಕ್ಕೆ ಸಂಪುಟ ಸಹೋದ್ಯೋಗಿಗಳು, ಪಕ್ಷದ ಕೋರ್ ಕಮಿಟಿ, ಕಾರ್ಯಕಾರಿ ಸಮಿತಿ, ಹಿರಿಯ ನಾಯಕರ ಆಶೀರ್ವಾದ ಇತ್ತು, ಇದು ಬಿಜೆಪಿಯ ಧ್ಯೇಯ ಮತ್ತು ಬಿಜೆಪಿಯ ಬದ್ಧತೆಯಾಗಿತ್ತು ಎಂದರು.

ಹತ್ತು ಹಲವಾರು ಪಕ್ಷಗಳನ್ನು ಮೀಸಲಾತಿ ಹೆಚ್ಚಳ ವಿಷಯವನ್ನೇ ದಾಳವಾಗಿ ಮಾಡಿಕೊಂಡು ಹಲವು ಚುನಾವಣೆ ಗೆದ್ದಿರುವುದನ್ನು ನೋಡಿದ್ದೇವೆ. ಆದರೆ ನಮ್ಮ ಉದ್ದೇಶ ಅದಲ್ಲ, ತುಳಿತಕ್ಕೊಳಗಾದರಿಗೆ, ಅವಕಾಶ ವಂಚಿತರಿಗೆ ನ್ಯಾಯ ಕೊಡಬೇಕು ಎನ್ನುವ ಕಾರಣಕ್ಕೆ ಕಳಕಳಿಯಿಂದ ನಾನು ಈ ಕೆಲಸ ಮಾಡಿದ್ದೇನೆ. ಕೆಲವರು ನಾವು ಮಾಡಿದ್ದೇವೆ ಎನ್ನುತ್ತಿದ್ದಾರೆ. ಆದರೆ ಅವರು ಅಧಿಕಾರದಲ್ಲಿದ್ದಾಗ ಏನೂ ಮಾಡಿರಲಿಲ್ಲ, ಆದರೆ ನಾವು ಮಾಡಿದ್ದೇವೆ. ಈಗ ಅದನ್ನು ಸರಿಯಾದ ರೀತಿಯಲ್ಲಿ ಜಾರಿ ಮಾಡುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಿಎಂ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನಾವು ಈಗ ಎಲ್ಲಿ ಹೋದರೂ ಎಸ್ಸಿ ಎಸ್ಟಿ ಜನ ಸ್ವಾಗತಿಸಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸವನ್ನು ಈ ಸಮುದಾಯಕ್ಕೆ ಮಾಡಬೇಕು ಎನ್ನುವ ಇಚ್ಛಾಶಕ್ತಿ ಇದೆ. ಅದನ್ನು ಮಾಡಿಯೇ ಮಾಡುತ್ತೇನೆ‌. ಇದರ ಜೊತೆ ಇನ್ನೂ ಹತ್ತು ಹಲವು ಸಮುದಾಯದಲ್ಲಿ ಅವಕಾಶ ವಂಚಿತರಿದ್ದಾರೆ. ಅವರಿಗೂ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತೇನೆ. ನಿಷ್ಠೆ ಪ್ರಾಮಾಣಿಕವಾಗಿ ಎಲ್ಲ ತುಳಿತಕ್ಕೊಳಗಾದವರ ಪರ ಕೆಲಸ ಮಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮೀಸಲಾತಿ ಸುಳಿವು ನೀಡಿದರು.

ಇದನ್ನೂ ಓದಿ:ವಸೂಲಿ ಮಾಡುವುದೇ ಸರ್ಕಾರದ ಕೆಲಸ : ಹೆಚ್​ ಡಿ ಕುಮಾರಸ್ವಾಮಿ ಕಿಡಿ

Last Updated : Oct 17, 2022, 7:17 PM IST

ABOUT THE AUTHOR

...view details