ಕರ್ನಾಟಕ

karnataka

ETV Bharat / state

ಕೋವಿಡ್ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವು: 25 ಲಕ್ಷ ಪರಿಹಾರ, ಕುಟುಂಬಸ್ಥರಿಗೆ ಸರ್ಕಾರಿ ಕೆಲಸ... ಸಿಎಂ ಘೋಷಣೆ - CM Yeddyurappa

ಕೋವಿಡ್ 19 ಕರ್ತವ್ಯದಲ್ಲಿದ್ದ ನೋಡಲ್ ಅಧಿಕಾರಿ ಹೆಚ್.ಗಂಗಾಧರಯ್ಯ ಎಂಬುವರು ಹೃದಯಾಘಾತದಿಂದ ಮರಣ ಹೊಂದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

CM Yeddyurappa
ಬಿ.ಎಸ್.ಯಡಿಯೂರಪ್ಪ

By

Published : Aug 8, 2020, 9:54 PM IST

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಕೋವಿಡ್ 19 ಕರ್ತವ್ಯದಲ್ಲಿದ್ದ ನೋಡಲ್ ಅಧಿಕಾರಿ ಹೆಚ್.ಗಂಗಾಧರಯ್ಯ ಎಂಬುವರು ಹೃದಯಾಘಾತದಿಂದ ಮರಣ ಹೊಂದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದು, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಸೇರಿದಂತೆ ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ದಕ್ಷ ಅಧಿಕಾರಿಯಾಗಿದ್ದ ಗಂಗಾಧರಯ್ಯ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details