ಕರ್ನಾಟಕ

karnataka

By

Published : Aug 14, 2019, 7:59 PM IST

ETV Bharat / state

ತುರ್ತು ಕೆಲಸಗಳಿಗೆ ಹಣ ಬಿಡುಗಡೆಗೆ ಸಿಎಂ ಸೂಚಿಸಿದ್ದಾರೆ: ಮೇಯರ್ ಗಂಗಾಂಬಿಕೆ

ಬೆಂಗಳೂರು ಮಹಾನಗರದಲ್ಲಿನ ತುರ್ತು ಅಭಿವೃದ್ದಿ ಕೆಲಸಗಳಿಗೆ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದು, ಕಾಮಗಾರಿಗಳಲ್ಲಿ ಭ್ರಷ್ಟಚಾರ ನಡೆಸಿದವರಿಗೆ ಶಿಕ್ಷೆಯಾಗಲಿ ಎಂದು ಮೇಯರ್​ ಗಂಗಾಂಬಿಕೆ ಹೇಳಿದ್ಧಾರೆ.

ಮೇಯರ್ ಗಂಗಾಂಬಿಕೆ

ಬೆಂಗಳೂರು:ಪಾಲಿಕೆಯ ತುರ್ತು ಕೆಲಸಗಳಿಗೆ ಯಾವುದೇ ತೊಂದರೆಯಾಗದಂತೆ ಅನುದಾನ‌‌ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎಂದು ಮೇಯರ್ ಗಂಗಾಂಬಿಕೆ ಹೇಳಿದ್ದಾರೆ.

ಮೇಯರ್ ಗಂಗಾಂಬಿಕೆ

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಜೆಟ್​ಗೆ ಅನುಮೋದನೆ ಕೊಡಿ ಎಂದು ಇವತ್ತು ಸಿಎಂ ಭೇಟಿ ಮಾಡಿ‌ ಮನವಿ ಮಾಡಿಕೊಂಡಿದ್ದೆವು. ಇನ್ನು ತುರ್ತು ಕೆಲಸಗಳು ಹಾಗೂ ದಿನನಿತ್ಯದ ಕೆಲಸಗಳಿಗೆ ಹಣ ಬಿಡುಗಡೆ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಬಗ್ಗೆ ಚರ್ಚೆ ಆಗಿದೆಯಂತೆ. ಬಜೆಟ್ ಬಗ್ಗೆ ಸಿಎಂ ಯಾವ ನಿರ್ಧಾರ ಕೈಗೊಂಡಿದ್ದಾರೆ ಅನ್ನೋ ಮಾಹಿತಿ ನನಗೆ ಸಿಕ್ಕಿಲ್ಲ ಎಂದರು.

ವೈಟ್ ಟ್ಯಾಪಿಂಗ್, ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಭ್ರಷ್ಟಾಚಾರವಾಗಿದೆ ಎಂದು ಬಿಜೆಪಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಭ್ರಷ್ಟಾಚಾರವಾಗಿದ್ರೆ ಸಿಎಂ ತನಿಖೆ ನಡೆಸಲಿ. ಈ ಕಾಮಗಾರಿಗಳನ್ನು ಕೌನ್ಸಿಲ್​ನಲ್ಲಿ‌ ಅನುಮೋದನೆ ಪಡೆದೇ ಮಾಡಲಾಗಿದೆ. ಭ್ರಷ್ಟಾಚಾರ ನಡೆದಿದ್ದರೆ, ಯಾರು ತಪ್ಪಿತಸ್ಥರಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಗಂಗಾಂಬಿಕೆ ಹೇಳಿದ್ದಾರೆ.

ABOUT THE AUTHOR

...view details