ಕರ್ನಾಟಕ

karnataka

ETV Bharat / state

ಮಂದಗತಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ: ಕಾಮಗಾರಿ ವೇಗ ಹೆಚ್ಚಿಸಲು ಸಿಎಂ ಸೂಚನೆ - shimoga airport construction latest news

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿ ವೇಗ ಹೆಚ್ಚಿಸಬೇಕೆಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

CM instructs to increase the work of Shimoga airport construction
ಮಂದಗತಿಯಲ್ಲಿಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣ : ಕಾಮಗಾರಿ ವೇಗ ಹೆಚ್ಚಿಸಲು ಸಿಎಂ ಸೂಚನೆ

By

Published : Dec 14, 2019, 2:21 PM IST

Updated : Dec 14, 2019, 3:11 PM IST

ಬೆಂಗಳೂರು : ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಯ ವೇಗ ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಬಳಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದುಕೊಂಡರು.

ಮಂದಗತಿಯಲ್ಲಿಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣ : ಕಾಮಗಾರಿ ವೇಗ ಹೆಚ್ಚಿಸಲು ಸಿಎಂ ಸೂಚನೆ

ಸಭೆಯ ಮುಖ್ಯಾಂಶಗಳು :
* ಕಾಮಗಾರಿ ವೇಗ ಹೆಚ್ಚಿಸಲು 4 ಜಿ ಅನುಮತಿ ನೀಡಲು‌ ಸೂಚಿಸಲಾಯಿತು. ರನ್‌ವೇಯನ್ನು 1.2 ಕಿಲೋಮೀಟರ್​ನಿಂದ 2.1 ಕಿಲೋಮೀಟರ್​ಗೆ ಹೆಚ್ಚಿಸಲು ಅನುಮತಿ.
* ಈಗಾಗಲೇ ಕಾಮಗಾರಿಗೆ 40 ಕೋಟಿ ರೂ ಹಣ ನೀಡಲಾಗಿದ್ದು ತಕ್ಷಣವೇ ಕೆಲಸ ಆರಂಭಿಸಬೇಕು.
* ಹೆಚ್ಚಿನ ಹಣಕಾಸು ಬೇಕಾದರೆ ಮುಂದಿನ‌ ದಿನಗಳಲ್ಲಿ ಹಣ ನೀಡಲಾಗುವುದೆಂದು ಭರವಸೆ.
* ಒಂದು ವಾರದೊಳಗೆ ಎಲ್ಲಾ ರೀತಿಯ ಪೇಪರ್ ವರ್ಕ್ ಮುಗಿಸಿ ಕೆಲಸ ಆರಂಭಿಸಲು ಸೂಚನೆ.
* 6 ತಿಂಗಳೊಳಗಾಗಿ ಶಿವಮೊಗ್ಗದಲ್ಲಿ ವಿಮಾನಗಳು ಹಾರಾಡಬೇಕು, ಇಲ್ಲದಿದ್ದರೆ‌ ಅದಕ್ಕೆ‌ ನೀವೇ ಜವಾಬ್ದಾರರಾಗುತ್ತೀರಾ ಎಂದು ಎಚ್ಚರಿಕೆ.
* ಸಿಗಂದೂರು ಸೇತುವೆಗೆ ಸಂಬಂಧಿಸಿದಂತೆ ಈಗಾಗಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿದ್ದು, ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ಲಿಯರೆನ್ಸ್ ತೆಗೆದುಕೊಳ್ಳಲು ಸೂಚನೆ.
* ಶಿವಮೊಗ್ಗ ರೈಲ್ವೇ ಟರ್ಮಿನಲ್​ಗೆ ಸಂಬಂಧಿಸಿದಂತೆ ಕೋಟೆ ಗಂಗೂರಿನಲ್ಲಿ ಭೂಸ್ವಾಧೀನ ಪಡಿಸಿಕೊಳ್ಳಲು ಸೂಚನೆ.

ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಸಲಹೆಗಾರ ಎಂ. ಲಕ್ಷ್ಮೀನಾರಾಯಣ್, ಕಾರ್ಯದರ್ಶಿ ಸೆಲ್ವಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Last Updated : Dec 14, 2019, 3:11 PM IST

ABOUT THE AUTHOR

...view details