ಬೆಂಗಳೂರು: ದೇವನಹಳ್ಳಿ ಬಳಿ ಇರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಶಾಸಕರೊಂದಿಗೆ ಸಭೆ ನಡೆಸಲು ಸಿಎಂ ಕುಮಾರಸ್ವಾಮಿ ಆಗಮಿಸಿದ್ದಾರೆ.
ಜೆಡಿಎಸ್ ಶಾಸಕರ ಜೊತೆ ಸಿಎಂ ಮಹತ್ವದ ಸಭೆ...
ದೇವನಹಳ್ಳಿ ಬಳಿ ಇರುವ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಶಾಸಕರೊಂದಿಗೆ ಸಭೆ ನಡೆಸಲು ಸಿಎಂ ಕುಮಾರಸ್ವಾಮಿ ಆಗಮಿಸಿದ್ದಾರೆ.
ಇಂದು ಅಧಿವೇಶನದಲ್ಲಿ ನಡೆದ ಘಟನೆ ಹಿನ್ನೆಲೆ ಶಾಸಕರ ಜೊತೆ ಸಮಾಲೋಚನೆ ಸಭೆ ನಡೆಸಲು ರೆಸಾರ್ಟ್ ಒಳಗಡೆ ಹೋದರು. ಒಂದು ಕಡೆ ಮಾಜಿ ಸಿಎಂ, ಕಾಂಗ್ರೆಸ್ ಪಕ್ಷದ ಶಾಸಕರ ಜೊತೆಯಲ್ಲಿ ಸಭೆ ನಡೆಸಿ ಮೈತ್ರಿ ಪಕ್ಷದ ಮುಖ್ಯಮಂತ್ರಿಗಳಿಗೆ ಬೆಂಬಲ ಇದೇ ರೀತಿ ಇರಲಿ. ಅತೃಪ್ತರನ್ನ ಕರೆತರುವುದು ಹೇಗೆ ಎಂಬುದು ಹೇಗೆ ಅಂತಾ ಚರ್ಚೆ ನಡೆಸಿದ್ರೆ, ಇತ್ತ ಜೆಡಿಎಸ್ ಶಾಸಕರೊಂದಿಗೆ ಸಿಎಂ ಕುಮಾರಸ್ವಾಮಿ ಸಭೆ ನಡೆಸಿ, ದೋಸ್ತಿ ಸರ್ಕಾರದ ವಿಶ್ವಾಸಮತ ಸಾಬೀತು ಪಡಿಸುವುದು ಹೇಗೆ? ವಿಫಲವಾದರೇ ಏನು ಮಾಡಬೇಕು.. ಏನು ಮಾಡಿದ್ರೆ ಸರಿಯಾಗುತ್ತದೆ. ಹೀಗೆ ಅನೇಕ ವಿಷಯಗಳ ಬಗ್ಗೆ ಚರ್ಚಿಸುವುದರ ಜೊತೆಗೆ ಮುಂದಿನ ರಾಜಕೀಯ ನಡೆಯ ಬಗ್ಗೆ ಕೂಲಂಕಶವಾಗಿ ಮಾತುಕತೆ ನಡೆಸಿ, ಶಾಸಕರಿಗೆ ಧೈರ್ಯ ತುಂಬುವ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ.
ನಾಳೆ ಸುಪ್ರೀಂ ಕೋರ್ಟ್ ತೀರ್ಪು ಹೊರ ಬೀಳಲಿದ್ದು, ಗುರುವಾರ ವಿಶ್ವಾಸಮತ ಯಾಚಿಸಲು ದಿನಾಂಕ ನಿಗದಿಪಡಿಸಿರುವುದರಿಂದ ಅಲ್ಲಿಯವರೆಗೂ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹೀಗಾಗಿ ಇನ್ನೂ ನಾಲ್ಕು ದಿನಗಳ ಕಾಲ ಜೆಡಿಎಸ್ ಶಾಸಕರು ರೆಸಾರ್ಟ್ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಅಲ್ಲದೇ ಸುಪ್ರೀಂ ತೀರ್ಪು ಏನಾಗುತ್ತದೆ ಅನ್ನೋ ಭೀತಿಯಲ್ಲಿರುವ ಸಿಎಂ ಕುಮಾರಸ್ವಾಮಿ, ಶಾಸಕರ ಮನ ಪರಿವರ್ತನೆಯಾಗದಂತೆ ನೋಡಿಕೊಳ್ಳಬೇಕಿದೆ.