ಬೆಂಗಳೂರು :ಕೃಷ್ಣರಾಜ ಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕೆಆರ್ಎಸ್ ಅಣೆಕಟ್ಟಿ ವ್ಯಾಪ್ತಿಯಲ್ಲಿ ಗಣಿಗಾರಿಕೆ.. ತಡೆಗಟ್ಟಲು ಸಿಎಂ ಕಟ್ಟುನಿಟ್ಟಿನ ಸೂಚನೆ - ಕೆಆರ್ಎಸ್ ಅಣೆಕಟ್ಟಿನಲ್ಲಿ ಗಣಿಗಾರಿಕೆ ಲೆಟೆಸ್ಟ್ ನ್ಯೂಸ್
ಕೆಆರ್ಎಸ್ ಡ್ಯಾಂ ಹಾಗೂ ಬೃಂದಾವನ ಪರಿಸರದಲ್ಲಿ ನಡೆಯುತ್ತಿರುವ ಗಣಿಗಾರಿಕೆ ತಡೆಯುವಂತೆ ಅಧಿಕಾರಿಗಳಿಗೆ ಸಿಎಂ ಖಡಕ್ ಆದೇಶ ನೀಡಿದ್ದಾರೆ.
![ಕೆಆರ್ಎಸ್ ಅಣೆಕಟ್ಟಿ ವ್ಯಾಪ್ತಿಯಲ್ಲಿ ಗಣಿಗಾರಿಕೆ.. ತಡೆಗಟ್ಟಲು ಸಿಎಂ ಕಟ್ಟುನಿಟ್ಟಿನ ಸೂಚನೆ ಕೆಆರ್ಎಸ್ ಅಣೆಕಟ್ಟು](https://etvbharatimages.akamaized.net/etvbharat/prod-images/768-512-5608180-thumbnail-3x2-bngs.jpg)
KRS Dam
ಅಣೆಕಟ್ಟಿನ ಭದ್ರತೆಗೆ ಧಕ್ಕೆಯಾಗದಂತೆ ಈ ಪರಿಸರದಲ್ಲಿ ಕೂಡಲೇ ಗಣಿಗಾರಿಕೆ ಸ್ಥಗಿತಗೊಳಿಸಿ ವರದಿ ಸಲ್ಲಿಸುವಂತೆ ಸಿಎಂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ನಿರ್ದೇಶನ ನೀಡಿರುವುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.