ಕರ್ನಾಟಕ

karnataka

ರಾಜ್ಯದಲ್ಲಿ ಮತ್ತೊಂದು ವಾರ Lockdown ವಿಸ್ತರಣೆ: 500ಕೋಟಿ ರೂ. ವಿಶೇಷ ಪ್ಯಾಕೇಜ್​ ಘೋಷಿಸಿದ CM

By

Published : Jun 3, 2021, 5:09 PM IST

Updated : Jun 3, 2021, 5:29 PM IST

ರಾಜ್ಯದಲ್ಲಿ ಮತ್ತೊಂದು ವಾರ ಲಾಕ್​ಡೌನ್ ವಿಸ್ತರಿಸಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ 2 ಸಾವಿರ ರೂ, ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ., ಮೀನುಗಾರರಿಗೆ ತಲಾ 3 ಸಾವಿರ ರೂ., ಅನುದಾನ ರಹಿತ ಶಾಲಾ ಶಿಕ್ಷಕರಿಗೆ ತಲಾ 5 ಸಾವಿರ ರೂ, ಮಗ್ಗಗಳ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

cm
cm

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಾರ ಲಾಕ್​ಡೌನ್ ವಿಸ್ತರಿಸಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಜೂನ್ 14 ರವರೆಗೆ ಕಠಿಣ ನಿರ್ಬಂಧಗಳು ಮುಂದುವರಿಯಲಿದ್ದು, ಕೆಲ ಕೈಗಾರಿಕಾ ವಲಯಗಳಿಗೆ ರಿಲೀಫ್ ನೀಡಿದ್ದಾರೆ.

500 ಕೋಟಿ ರೂ. ವಿಶೇಷ ಪ್ಯಾಕೇಜ್:​

ಸಂಕಷ್ಟದಲ್ಲಿರುವ ವಲಯಗಳಿಗೆ ರಾಜ್ಯ ಸರ್ಕಾರದಿಂದ 500 ಕೋಟಿ ರೂ.ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ.

ಯಾರಿಗೆ ಸಹಾಯಧನ?

ಚಲನಚಿತ್ರ, ದೂರದರ್ಶನ ಕಲಾವಿದರಿಗೆ ತಲಾ 3 ಸಾವಿರ ರೂ., ಅರ್ಚಕರು, ಅಡುಗೆ ಕೆಲಸಗಾರರಿಗೆ ತಲಾ 3 ಸಾವಿರ ರೂ., ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ 2 ಸಾವಿರ ರೂ, ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ., ಮೀನುಗಾರರಿಗೆ ತಲಾ 3 ಸಾವಿರ ರೂ., ಅನುದಾನ ರಹಿತ ಶಾಲಾ ಶಿಕ್ಷಕರಿಗೆ ತಲಾ 5 ಸಾವಿರ ರೂ, ಮಗ್ಗಗಳ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

ಶಾಲಾ ಮಕ್ಕಳಿಗೆ ಜೂನ್, ಜುಲೈನಲ್ಲಿ ಹಾಲಿನ ಪುಡಿ ನೀಡಲಾಗುವುದು, ಸಣ್ಣ ಕೈಗಾರಿಕೆಗಳ ವಿದ್ಯುತ್​ ಬಿಲ್ ಪಾವತಿಯಲ್ಲಿ ರಿಯಾಯಿತಿ ನೀಡಲಾಗಿದೆ.

ಹೋಟೆಲ್​​ಗಳಲ್ಲಿ ಪಾರ್ಸೆಲ್​​ಗೆ ಮಾತ್ರ ಅವಕಾಶ:

ಹೋಟೆಲ್​ಗಳನ್ನು ಸಂಜೆವರೆಗೂ ತೆರೆಯಬಹುದು, ಕೇವಲ ಪಾರ್ಸಲ್​ಗೆ ಮಾತ್ರ ಅವಕಾಶವಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

Last Updated : Jun 3, 2021, 5:29 PM IST

ABOUT THE AUTHOR

...view details