ಕರ್ನಾಟಕ

karnataka

ETV Bharat / state

ಮೆಟ್ರೋ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಂಗ್ಲ ಭಾಷಣ ನಿರಾಕರಿಸಿ ಕನ್ನಡದಲ್ಲೇ ಮಾತನಾಡಿದ ಸಿಎಂ ಸಿದ್ದರಾಮಯ್ಯ - metro inauguration event

ಮೆಟ್ರೋ ಲೋಕಾರ್ಪಣೆ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯನವರು ಕನ್ನಡದಲ್ಲೇ ಭಾಷಣ ಮಾಡಿದರು.

siddaramaiah
ಸಿಎಂ ಸಿದ್ದರಾಮಯ್ಯ

By ETV Bharat Karnataka Team

Published : Oct 21, 2023, 9:14 AM IST

ಬೆಂಗಳೂರು :ಮೆಟ್ರೋ ಲೋಕಾರ್ಪಣೆ ವರ್ಚುವಲ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಇಂಗ್ಲಿಷ್​ನಲ್ಲಿ ಭಾಷಣ ಮಾಡಲು ನಿರಾಕರಿಸಿ, ಕನ್ನಡದಲ್ಲೇ ಮಾತನಾಡಿದರು. ಉತ್ತರ ಪ್ರದೇಶದಿಂದ ವರ್ಚುವಲ್ ಮೂಲಕ ಪ್ರಧಾನಿ ಮೋದಿ ಕೃಷ್ಣರಾಜಪುರ ದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟದವರೆಗೆ ಎರಡು ವಿಸ್ತರಣೆಗಳ ಪೂರ್ವ-ಪಶ್ಚಿಮ ಕಾರಿಡಾರ್ ಅನ್ನು ಅಧಿಕೃತವಾಗಿ ಶುಕ್ರವಾರ ಲೋಕಾರ್ಪಣೆ ಮಾಡಿದರು. ಈ ವೇಳೆ ವರ್ಚುವಲ್ ಮೂಲಕ ಗೃಹ ಕಚೇರಿ ಕೃಷ್ಣಾದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಸಿದ್ದರಾಮಯ್ಯ ಕನ್ನಡದಲ್ಲೇ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಭಾಷಣ ಪ್ರಾರಂಭಿಸುವ ಮುನ್ನ ಸಿಎಂ ಸಿದ್ದರಾಮಯ್ಯನವರು, ನಾನು ಇಂಗ್ಲಿಷ್​ನಲ್ಲಿ ಭಾಷಣ ಮಾಡಲು ಆಗುವುದಿಲ್ಲ‌ ಎಂದು ಹೇಳಿ ಕನ್ನಡದಲ್ಲೇ ಮಾತು ಪ್ರಾರಂಭಿಸಿದರು. ಇದಕ್ಕೂ ಮುನ್ನ ವರ್ಚುವಲ್ ಡಿಸ್​ಪ್ಲೇನಲ್ಲಿ ನಿಮ್ಮ ಫೋಟೋ ಹಾಕಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಎಂ ಅವರಿಗೆ ಹೇಳಿದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರು ಎಲ್ಲಿದೆ? ಎಂದು ಕೇಳಿದರು. ಬಳಿಕ ಪರದೆ ಮೇಲೆ ತಮ್ಮ ಫೋಟೋ ಬಂದಿರುವುದನ್ನು ಗಮನಿಸಿದರು.

ಇದಕ್ಕೂ ಮುನ್ನ ಅಧಿಕಾರಿಯೊಬ್ಬರು ಯಾವ ಭಾಷೆಯಲ್ಲಿ ಮಾತನಾಡುತ್ತೀರಾ ಎಂದು ಸಿಎಂ ಬಳಿ ಕೇಳಿದಾಗ ಉತ್ತರಿಸಿದ ಸಿದ್ದರಾಮಯ್ಯ, "ನಾನು ಕನ್ನಡಲ್ಲೇ ಮಾತನಾಡುತ್ತೇನೆ, ಕರ್ನಾಟಕದಿಂದ ಮಾತನಾಡುತ್ತಿರುವುದು. ಅವರಿಗಾಗಿ ಇಂಗ್ಲಿಷ್​ನಲ್ಲಿ ಭಾಷಣ ಮಾಡಲು ಆಗುವುದಿಲ್ಲ" ಎಂದು ಹೇಳಿ ಮಾತೃ ಭಾಷೆಯಲ್ಲೇ ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು.

ಇದನ್ನೂ ಓದಿ :ನಮೋ ಭಾರತ್ ಕ್ಷಿಪ್ರ ರೈಲು ಸೇವೆಗೆ ಪ್ರಧಾನಿ ಮೋದಿ ಚಾಲನೆ : ರ‍್ಯಾಪಿಡ್ ಎಕ್ಸ್ ರೈಲಿನ ವಿಶೇಷತೆ ಏನು ?

ನಿದ್ದೆಗೆ ಜಾರಿದ ಸಿಎಂ ಸಿದ್ದರಾಮಯ್ಯ :ಇತ್ತ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ನಿದ್ದೆಗೆ ಜಾರಿದ ಘಟನೆಯೂ ನಡೆಯಿತು.‌ ವರ್ಚುವಲ್ ಕಾರ್ಯಕ್ರಮ ಸುದೀರ್ಘವಾಗಿ ನಡೆದ ಕಾರಣ ಸಿಎಂ ಸಿದ್ದರಾಮಯ್ಯ ತುಸು ಹೊತ್ತು ತೂಕಡಿಸಿದರು. ಬಳಿಕ, ಎಚ್ಚೆತ್ತುಕೊಂಡರು.

ಇದನ್ನೂ ಓದಿ :ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕ್ Vs ಆಸ್ಟ್ರೇಲಿಯಾ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಗಾಜಿಯಾಬಾದ್‌ನಲ್ಲಿ ದೇಶದ ಮೊದಲ ಕ್ಷಿಪ್ರ ರೈಲು ನಮೋ ಭಾರತ್​ಗೆ ಚಾಲನೆ ನೀಡಿದರು. ದೆಹಲಿ ಮತ್ತು ಮೀರತ್ ನಡುವೆ 82 ಕಿಲೋ ಮೀಟರ್ ಉದ್ದದ ಕಾರಿಡಾರ್ ನಿರ್ಮಿಸಲಾಗಿದ್ದು, ಈ ರೈಲಿಗೆ 'ನಮೋ ಭಾರತ್' ಎಂದು ಹೆಸರಿಡಲಾಗಿದೆ. ಮೊದಲ ಹಂತದಲ್ಲಿ ಈ ರೈಲು ಸಾಹಿಬಾಬಾದ್ ಮತ್ತು ದುಹೈ ನಡುವೆ 17 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ. ಮೋದಿ ಅವರು ರೈಲಿಗೆ ಚಾಲನೆ ನೀಡುವ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿದಂತೆ ಕೇಂದ್ರ ಸಚಿವರು ಉಪಸ್ಥಿತರಿದ್ದರು.

ಇದನ್ನೂ ಓದಿ :ನೂತನ 70 ಜನ ಶಾಸಕರು ಡಿಕೆ ಶಿವಕುಮಾರ್ ಬೆಂಬಲಕ್ಕೆ ಇದ್ದೇವೆ : ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್

ABOUT THE AUTHOR

...view details