ಬೆಂಗಳೂರು: "ಸಂವಿಧಾನ ವಿರೋಧಿಗಳ ಕೈಯಲ್ಲಿ ಅಧಿಕಾರ ನೀಡಿ ನಿಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಸಂವಿಧಾನ ವಿರೋಧಿಗಳ ಒಡೆದು ಆಳುವ ನೀತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಿ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಟೌನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ಜಯಂತ್ಯುತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಸಂವಿಧಾನ ರಚನಾ ಸಮಿತಿಗೆ ಅಂಬೇಡ್ಕರ್ ಅವರು ಅಧ್ಯಕ್ಷರಾಗದೇ ಹೋಗಿದ್ದರೆ ನಮ್ಮ ದೇಶಕ್ಕೆ ಇಷ್ಟೊಂದು ಅರ್ಥಪೂರ್ಣವಾದ ಸಂವಿಧಾನ ದೊರೆಯುತ್ತಿರಲಿಲ್ಲ" ಎಂದರು.
ಡಿ.ದೇವರಾಜ ಅರಸು ಜಯಂತೋತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶ "ಅಂಬೇಡ್ಕರ್ ಭಾರತೀಯ ಸಮಾಜಕ್ಕೆ ತಕ್ಕ ಸಾಮಾಜಿಕ ನ್ಯಾಯದ ಸಂವಿಧಾನ ನೀಡಿದರು. ಆದರೆ ಇಲ್ಲಿಯವರೆಗೂ ಸಂವಿಧಾನದ ಆಶಯಗಳು ಸಂಪೂರ್ಣ ಈಡೇರಿಲ್ಲ. ಶ್ರಮಿಕ ಶೂದ್ರ ವರ್ಗ ಶ್ರಮಿಕರಲ್ಲದವರ ಸೇವೆ ಮಾಡಿಕೊಂಡಿರಬೇಕಿತ್ತು. ಇದನ್ನು ದೇವರಾಜ ಅರಸರು ಜೀತ ವಿಮುಕ್ತಿ, ಋಣಮುಕ್ತ ಕಾರ್ಯಕ್ರಮಗಳ ಮೂಲಕ ತಪ್ಪಿಸಿದರು" ಎಂದು ಹೇಳಿದರು.
ಡಿ.ದೇವರಾಜ ಅರಸು ಜಯಂತೋತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶ "ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ತಮ್ಮ ಮುಖ್ಯಮಂತ್ರಿ ಸ್ಥಾನದ ಮೂಲಕ ಸಮರ್ಥವಾಗಿ ಜಾರಿ ಮಾಡಲು ದೇವರಾಜ ಅರಸು ಅವರು ಸಾಕಷ್ಟು ಶ್ರಮಿಸಿದ್ದರು. ಅವರಿಗಿಂತ ಮುಂಚಿನ ಯಾವ ಮುಖ್ಯಮಂತ್ರಿಗಳೂ ಜಾರಿ ಮಾಡದ ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಯಾಗಿ ಜಾರಿ ಮಾಡಿದರು" ಎಂದು ವಿವರಿಸಿದರು.
ಡಿ.ದೇವರಾಜ ಅರಸು ಜಯಂತೋತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶ ಇದನ್ನೂ ಓದಿ:ಮೊದಲು ನಮ್ಮ ರೈತರ ಬೆಳೆಗಳಿಗೆ ನೀರು ಹರಿಸಿ, ಬೆಳೆ ಸಂರಕ್ಷಿಸಿ: ಸಿಎಂ ಸಿದ್ದರಾಮಯ್ಯ
"ಸಂವಿಧಾನ ವಿರೋಧಿಗಳಿಗೆ, ಬಡ-ಮಧ್ಯಮ ವರ್ಗದ ವಿರೋಧಿಗಳ ಕೈಯಲ್ಲಿ ಅಧಿಕಾರ ಕೊಟ್ಟರೆ ಸಾಮಾಜಿಕ ನ್ಯಾಯ ನೆನೆಗುದಿಗೆ ಬೀಳುತ್ತದೆ. ದೇವರಾಜ ಅರಸರು ಹಾವನೂರು ವರದಿ ಜಾರಿ ಮಾಡುವವರೆಗೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಿಕ್ಕಿರಲಿಲ್ಲ. ಎಷ್ಟೇ ವಿರೋಧ ಬಂದರೂ ಎದೆಗುಂದದೆ ಹಾವನೂರು ವರದಿ ಜಾರಿ ಮಾಡಿದ ಎದೆಗಾರಿಕೆ ಅರಸು ಅವರಾಗಿದ್ದಾರೆ" ಎಂದು ಮೆಚ್ಚುಗೆ ಸೂಚಿಸಿದರು.
ಡಿ.ದೇವರಾಜ ಅರಸು ಜಯಂತೋತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶ "ದೇವರಾಜ ಅರಸು ಅವರು ಉಳುವವನೇ ಭೂ ಒಡೆಯ ಎನ್ನುವ ಕಾನೂನನ್ನು ಬಿಜೆಪಿಯವರು ಉಲ್ಟಾ ಮಾಡಿ ಉಳ್ಳವನೇ ಭೂ ಒಡೆಯ ಎಂದು ಬದಲಾಯಿಸಿಬಿಟ್ಟಿದ್ದಾರೆ. ಇದಕ್ಕಾಗಿ ಸಂವಿಧಾನ 79 (a), (b) ವನ್ನೇ ರದ್ದುಪಡಿಸಿದ್ದಾರೆ" ಎಂದು ಟೀಕಿಸಿದರು. "ಅಧಿಕಾರ ಯಾರ ಕೈಗೆ ಕೊಡಬೇಕು ಎನ್ನುವ ಸ್ಪಷ್ಟ ತಿಳುವಳಿಕೆ ದಲಿತ-ಶೂದ್ರ ಸಮುದಾಯ ಪಡೆದುಕೊಳ್ಳಬೇಕು. ದಲಿತ, ಶೂದ್ರ, ಬಡವ ಮತ್ತು ಮಧ್ಯಮ ವರ್ಗಗಳಿಗೆ ಬದುಕಿನ ಅವಕಾಶ ದೊರಕಿದ್ದು ಸಂವಿಧಾನದಿಂದ. ಈ ಸಂವಿಧಾನವನ್ನು ದ್ಷೇಷಿಸುವವರಿಗೆ ಅಧಿಕಾರ ಕೊಟ್ಟರೆ ಬಡವ, ಮಧ್ಯಮ ವರ್ಗದವರ ಉದ್ಧಾರ ಆಗಲು ಹೇಗೆ ಸಾಧ್ಯ?" ಎಂದು ಪ್ರಶ್ನಿಸಿದರು.
"ಬಡವರ ಮತ್ತು ಮಧ್ಯಮ ವರ್ಗದವರ ಬದುಕಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳಿಗೆ ಹಣ ಬಳಕೆಯ ಕುರಿತು ಬಿಜೆಪಿ ಭಯಾನಕ ಸುಳ್ಳು ಹೇಳುತ್ತಿದೆ. ಇದನ್ನು ನಂಬಬೇಡಿ ದಾಖಲೆಗಳನ್ನು ನೋಡಿ ಅವರಿಗೆ ಪಾಠ ಕಲಿಸಿ" ಎಂದರು. ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ದಸಂಸ ಮುಖಂಡ ಡಿ ಜಿ ಸಾಗರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ:ವೈಜ್ಞಾನಿಕ-ವೈಚಾರಿಕ ಶಿಕ್ಷಣ ಸಿಗದೇ ಹೋದರೆ ಸಮಾಜಕ್ಕೆ ಜಡತ್ವ ಹಿಡಿಯುತ್ತದೆ : ಮುಖ್ಯಮಂತ್ರಿ ಸಿದ್ದರಾಮಯ್ಯ