ETV Bharat Karnataka

ಕರ್ನಾಟಕ

karnataka

ETV Bharat / state

ಲಕ್ಷ್ಮಿ ಮಿತ್ತಲ್, ಫ್ಲಾರೆನ್ಸ್ ವರ್ಜಿನ್​​ ಜತೆ ಸಿಎಂ ಸಮಾಲೋಚನೆ:  ಬಂಡವಾಳ ಹೂಡಿಕೆಗೆ ಆಹ್ವಾನ - ರಾಜ್ಯದಲ್ಲಿ ಹೂಡಿಕೆ ಮಾಡಲು ಆಹ್ವಾನ

ವಿಶ್ವ ಆರ್ಥಿಕ ಶೃಂಗ ಸಭೆಯ ಎರಡನೇ ದಿನವಾದ ಇಂದು, ವಿವಿಧ ಕಂಪನಿಗಳ ಸಿಇಒಗಳ ಜೊತೆ ಮುಖ್ಯಮಂತ್ರಿ ಬಿ.ಎಸ್​​​. ಯಡಿಯೂರಪ್ಪ ಮಾತುಕತೆ ನಡೆಸಿದರು. ಅಲ್ಲದೇ ರಾಜ್ಯದಲ್ಲಿ ಹೂಡಿಕೆ ಮಾಡಲು ಆಹ್ವಾನ ನೀಡಿದರು.

CM talks with Lakshmi Mittal
ಕಂಪನಿಗಳ ಸಿಇಒಗಳ ಜೊತೆ ಸಿಎಂ ಮಾತುಕತೆ
author img

By

Published : Jan 22, 2020, 6:55 PM IST

ಬೆಂಗಳೂರು: ಸ್ವಿಟ್ಜರ್ಲೆಂಡ್​​ ನ ದಾವೋಸ್​​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯ ಎರಡನೇ ದಿನವಾದ ಇಂದು, ವಿವಿಧ ಕಂಪನಿಗಳ ಸಿಇಒಗಳ ಜೊತೆ ಮುಖ್ಯಮಂತ್ರಿ ಬಿ.ಎಸ್​​​. ಯಡಿಯೂರಪ್ಪ ಮಾತುಕತೆ ನಡೆಸಿದರು. ರಾಜ್ಯದಲ್ಲಿ ಬಂಡವಾಳ ತೊಡಗಿಸುವಂತೆ ನೇರ ಆಹ್ವಾನ ನೀಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ದಾವೋಸ್​ನ ಕರ್ನಾಟಕ ಪೆವಿಲಿಯನ್​​ನಲ್ಲಿ ದಸ್ಸಾ ಸಿಸ್ಟಂನ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಫ್ಲಾರೆನ್ಸ್ ವರ್ಜಿನ್​​ ಅವರನ್ನ ಭೇಟಿ ಮಾಡಿ ಚರ್ಚಿಸಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಐ.ಟಿ/ ಬಿ.ಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ ಸಮ್ಮುಖದಲ್ಲಿ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನ ನೀಡಿ, ಅಗತ್ಯ ಸೌಲಭ್ಯ ಕಲ್ಪಿಸುವ ಭರವಸೆ ನೀಡಿದರು.

in article image
ಕಂಪನಿಗಳ ಸಿಇಒಗಳ ಜೊತೆ ಸಿಎಂ ಮಾತುಕತೆ

ದಾವೋಸ್​​ನಲ್ಲಿ ಸಿಐಐ ಏರ್ಪಡಿಸಿದ್ದ ಔತಣಕೂಟದ ಸಂದರ್ಭದಲ್ಲಿ ಅರ್ಸೆಲರ್ ಮಿತ್ತಲ್ ಸಂಸ್ಥೆಯ ಸಿ.ಇ. ಒ. ಲಕ್ಷ್ಮಿ ಮಿತ್ತಲ್ ಅವರೊಂದಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅನೌಪಚಾರಿಕ ಚರ್ಚೆ ನಡೆಸಿದರು. ರಾಜ್ಯದಲ್ಲಿನ ಉದ್ಯಮ ಸ್ನೇಹಿ ವಾತಾವರಣ, ಮೂಲಸೌಕರ್ಯ ಇತ್ಯಾದಿಗಳನ್ನು ವಿವರಿಸಿ ಹೂಡಿಕೆಗೆ ಆಹ್ವಾನ ನೀಡಿದರು.

ಈ ನಡುವೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಇಂದು ಸ್ವಿಟ್ಜರ್ಲೆಂಡ್​ನ ದಾವೋಸ್​ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಕರ್ನಾಟಕ ಪೆವಿಲಿಯನ್​ಗೆ ಆಗಮಿಸಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು.

ABOUT THE AUTHOR

...view details