ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರಕ್ಕೆ ಸಿಎಂ ಬಿಎಸ್‌ವೈ 2 ದಿನದ ಪ್ರವಾಸ.. ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ - ಮಹಾರಾಷ್ಟ್ರಕ್ಕೆ ಸಿಎಂ ಬಿಎಸ್​ವೈ ಪ್ರವಾಸ

ಸಿಎಂ ಬಿ ಎಸ್​ ಯಡಿಯೂರಪ್ಪ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲು 2 ದಿನಗಳ ಕಾಲ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ಮಹಾರಾಷ್ಟ್ರಕ್ಕೆ ಸಿಎಂ ಪ್ರಯಾಣ

By

Published : Oct 14, 2019, 4:23 PM IST

ಬೆಂಗಳೂರು:ಅಕ್ಟೋಬರ್ ‌16 ಮತ್ತು 17ರಂದು ಎರಡು ‌ದಿನ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭಾಗಿಯಾಗಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.

ಅಕ್ಟೋಬರ್ 21ರಂದು ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯುತ್ತಿದ್ದು, ಮಹಾರಾಷ್ಟ್ರದ ಸೊಲ್ಲಾಪುರದಿಂದ ಸಿಎಂ ಬಿಎಸ್​ವೈ ಪ್ರಚಾರ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ ಬೆಳಗಾವಿಗೆ ತೆರಳಲಿರುವ ಸಿಎಂ ರಾತ್ರಿ‌ ಬೆಳಗಾವಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಾಡಿದ್ದು ಬೆಳಗ್ಗೆ ಸೊಲ್ಲಾಪುರದಿಂದ ಪ್ರಚಾರ ಆರಂಭಿಸಲಿದ್ದಾರೆ.

ಸೊಲ್ಲಾಪುರ, ಹಿಂಗೋಳಿ, ಸಾಂಗ್ಲಿ, ಲಾತೂರ್, ಬೀಡ್ ಮತ್ತು ಕೊಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಬಿಎಸ್​ವೈ ಮತಯಾಚಿಸಲಿದ್ದಾರೆ. ಸಿಎಂ ಯಡಿಯೂರಪ್ಪಗೆ ಡಿಸಿಎಂ ಲಕ್ಷ್ಮಣ ಸವದಿ ಸಾಥ್​ ನೀಡಲಿದ್ದಾರೆ. ಲಿಂಗಾಯತರು ಇರುವ ಕಡೆ ಸಿಎಂ ಬಿಎಸ್​ವೈ ಅವರಿಂದ ಪ್ರಚಾರ ನಡೆಸುವ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಮಹಾರಾಷ್ಟ್ರ ಸಿಎಂ ಮುಂದಾಗಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಅಕ್ಟೋಬರ್ 17ರ ರಾತ್ರಿ ಸಿಎಂ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ABOUT THE AUTHOR

...view details