ಕರ್ನಾಟಕ

karnataka

ಬಸವಕಲ್ಯಾಣದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ರೆಬಲ್ ಅಭ್ಯರ್ಥಿ ಮನವೊಲಿಕೆ ಮಾಡುವಂತೆ ಸಚಿವರಿಗೆ ಸಿಎಂ ಸೂಚನೆ..!

ಬಸವಕಲ್ಯಾಣ ಕ್ಷೇತ್ರದ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮನವೊಲಿಕೆ ಕುರಿತು ಕ್ಷೇತ್ರದ ಚುನಾವಣಾ ಜವಾಬ್ದಾರಿ ಹೊತ್ತಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದ್ದಾರೆ.

By

Published : Mar 31, 2021, 1:52 PM IST

Published : Mar 31, 2021, 1:52 PM IST

cm yadiyurappa and basavaraj bommaiah meets
ಬಿ.ಎಸ್.ಯಡಿಯೂರಪ್ಪ ಸಭೆ

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದ್ದು, ‌ರೆಬಲ್ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮನವೊಲಿಕೆ ಕುರಿತು ಸಚಿವರ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿದರು.

ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಅಧಿಕೃತ ಅಭ್ಯರ್ಥಿ ಶರಣು ಸಲಗರ್ ನಾಮಪತ್ರ ಸಲ್ಲಿಸಿದ್ದು, ಬಂಡಾಯ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖೂಬಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ, ಈ ಹಿನ್ನೆಲೆಯಲ್ಲಿ ಕ್ಷೇತ್ರದ ಚುನಾವಣಾ ಜವಾಬ್ದಾರಿ ಹೊತ್ತಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಅಧಿಕೃತ ನಿವಾಸ ಕಾವೇರಿಗೆ ಕರೆಸಿಕೊಂಡು ಸಿಎಂ ಯಡಿಯೂರಪ್ಪ ಚರ್ಚೆ ನಡೆಸಿದರು.

ಮೂರೂ ಕ್ಷೇತ್ರದ ಉಪ ಚುನಾವಣೆಯನ್ನು ಗೆಲ್ಲಲೇಬೇಕು, ಬಂಡಾಯ ಅಭ್ಯರ್ಥಿ ಕಾರಣದಿಂದ ನಮಗೆ ಹಿನ್ನಡೆಯಾಗಬಾರದು ಹಾಗಾಗಿ ಕೂಡಲೇ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಮನವೊಲಿಕೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹೊಸಕೋಟೆ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿ ಕಾರಣದಿಂದಲೇ ಪಕ್ಷದ ಅಧಿಕೃತ ಅಭ್ಯರ್ಥಿ ಸೋತ ನಿದರ್ಶನ ಕಣ್ಣ ಮುಂದಿರುವ ಹಿನ್ನೆಲೆಯಲ್ಲಿ ರೆಬಲ್ ಅಭ್ಯರ್ಥಿ ಮನವೊಲಿಕೆ ಕಸರತ್ತಿಗೆ ಸಿಎಂ ಸೂಚನೆ ನೀಡಿದ್ದಾರೆ.

ಬೊಮ್ಮಾಯಿ,‌ಲಕ್ಷ್ಮಣ ಸವದಿ, ಸೋಮಣ್ಣ ನೇತೃತ್ವದಲ್ಲಿ ಸಂಧಾನ ಕಾರ್ಯವನ್ನು ನಡೆಸುವಂತೆ ಸಿಎಂ ನಿರ್ದೇಶನ ನೀಡಿದ್ದು, ಮೂವರು ಸಚಿವರು ಇದೀಗ ಬಂಡಾಯ ಅಭ್ಯರ್ಥಿ ಖೂಬಾ ಮನವೊಲಿಕೆ ಕಾರ್ಯ ಆರಂಭಿಸಲಿದ್ದಾರೆ.

ಇದನ್ನೂ ಓದಿ:ಬೈ ಎಲೆಕ್ಷನ್ : ಮುನಿಸು ಮರೆತು ಒಂದಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್‌

ABOUT THE AUTHOR

...view details