ಬೆಂಗಳೂರು :ಸಚಿವ ಸಂಪುಟ ಪುನಾರಚನೆ ವೇಳೆ ರಾಜ್ಯದ ನಾಲ್ವರು ಸದಸ್ಯರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.
ಕೇಂದ್ರ ಸಂಪುಟದಲ್ಲಿ ನಾಲ್ವರಿಗೆ ಅವಕಾಶ : ಮೋದಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಬಿಎಸ್ವೈ
ರಾಜ್ಯದ ಜನತೆಯ ಪರವಾಗಿ ಪ್ರಧಾನಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಾಲ್ವರೂ ಪ್ರಭಾವಿಯಾಗಿ, ಶಕ್ತಿಯುತವಾಗಿ ಕೆಲಸ ಮಾಡಿಕೊಂಡು ಹೋಗುವ ವಿಶ್ವಾಸ ಇದೆ..
ಸಿಎಂ ಬಿಎಸ್ವೈ
ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರು ರಾಜ್ಯದ ನಾಲ್ವರಿಗೆ ಸಚಿವ ಸ್ಥಾನ ನೀಡಿದ್ದಾರೆ. ರಾಜ್ಯದ ಜನತೆಯ ಪರವಾಗಿ ಪ್ರಧಾನಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಾಲ್ವರೂ ಪ್ರಭಾವಿಯಾಗಿ, ಶಕ್ತಿಯುತವಾಗಿ ಕೆಲಸ ಮಾಡಿಕೊಂಡು ಹೋಗುವ ವಿಶ್ವಾಸ ಇದೆ.
ನಾಲ್ವರೂ ಕೇಂದ್ರದಲ್ಲಿ ಸಚಿವರಾಗಿರುವುದರಿಂದ ರಾಜ್ಯಕ್ಕೂ ಶಕ್ತಿ ಬರಲಿದೆ. ಹಾಗಾಗಿ, ಮತ್ತೊಮ್ಮೆ ಪ್ರಧಾನಿಯವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದಿದ್ದಾರೆ.