ಕರ್ನಾಟಕ

karnataka

ETV Bharat / state

ಈ ತಿಂಗಳಲ್ಲೇ ಸಚಿವ ಸಂಪುಟ ವಿಸ್ತರಣೆ, ಶಾಸಕರು ಆತಂಕ‌ ಪಡಬೇಕಿಲ್ಲ: ಸಿಎಂ ಬಿಎಸ್​ವೈ - The Cabinet expansion is in this month CMBSY

ಇವತ್ತು ಅಮಿತ್ ಶಾ ಟೈಂ ಕೊಟ್ಟಿದ್ದರು. ಆದರೆ ದೇವದುರ್ಗದಲ್ಲಿ ಹಾಲುಮತದ ಕಾರ್ಯಕ್ರಮ ಮುಖ್ಯವಾಗಿತ್ತು. ಹಾಗಾಗಿ ನಾಳೆ ದೆಹಲಿಗೆ ಹೋಗೋದಕ್ಕೆ ಪ್ರಯತ್ನ ನಡೆಸುತ್ತೇನೆ. ನಾಳೆ ಅಮಿತ್ ಶಾ ಸಿಕ್ಕರೆ ಎಲ್ಲಾ ಕಾರ್ಯಕ್ರಮಗಳನ್ನ ರದ್ದು ಮಾಡಿ ಹೋಗುತ್ತೇನೆ. ಒಂದು ವೇಳೆ ಅದು ಆಗಲಿಲ್ಲ ಅಂದರೆ ಜನವರಿ 17-18ರಂದು ಇಲ್ಲಿಗೇ ಬರ್ತಾರೆ. ಆಗ ಅಮಿತ್ ಶಾ ಜೊತೆ ಚರ್ಚೆ ಮಾಡಿ ಸಂಪುಟ ವಿಸ್ತರಣೆ ಮಾಡೇ ಮಾಡುತ್ತೇನೆ ಎಂದು ಸಿಎಂ ಬಿಎಸ್​ವೈ ಸ್ಪಷ್ಟಪಡಿಸಿದ್ದಾರೆ.

The Cabinet expansion is in this month CMBSY
ಸಿಎಂ ಬಿಎಸ್​ವೈ ಸ್ಪಷ್ಟನೆ

By

Published : Jan 13, 2020, 11:50 AM IST

ಬೆಂಗಳೂರು: ನಮ್ಮ ಜೊತೆ ಬಂದಿರೋರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ನೂರಕ್ಕೆ ನೂರರಷ್ಟು ಸಂಪುಟ ವಿಸ್ತರಣೆ ಆಗುತ್ತದೆ. ಮಾಧ್ಯಮಗಳಲ್ಲಿ ಬರ್ತಿರೋದು ಎಲ್ಲವೂ ಊಹಾಪೋಹಗಳು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ, ಸಿಎಂ

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಇವತ್ತು ಅಮಿತ್ ಶಾ ಟೈಂ ಕೊಟ್ಟಿದ್ದರು. ಆದರೆ ದೇವದುರ್ಗದಲ್ಲಿ ಹಾಲುಮತದ ಕಾರ್ಯಕ್ರಮ ಮುಖ್ಯವಾಗಿತ್ತು. ಹಾಗಾಗಿ ನಾಳೆ ದೆಹಲಿಗೆ ಹೋಗೋದಕ್ಕೆ ಪ್ರಯತ್ನ ನಡೆಸುತ್ತೇನೆ. ನಾಳೆ ಅಮಿತ್ ಶಾ ಸಿಕ್ಕರೆ ಎಲ್ಲಾ ಕಾರ್ಯಕ್ರಮಗಳನ್ನ ರದ್ದು ಮಾಡಿ ಹೋಗುತ್ತೇನೆ. ಒಂದು ವೇಳೆ ಅದು ಆಗಲಿಲ್ಲ ಅಂದರೆ ಜನವರಿ 17-18ರಂದು ಇಲ್ಲಿಗೇ ಬರ್ತಾರೆ. ಆಗ ಅಮಿತ್ ಶಾ ಜೊತೆ ಚರ್ಚೆ ಮಾಡಿ ಸಂಪುಟ ವಿಸ್ತರಣೆ ಮಾಡೇ ಮಾಡುತ್ತೇನೆ ಎಂದರು.

ದಾವೋಸ್‌ಗೆ ಹೋಗಬೇಕು ಅಂತಾ ಒತ್ತಾಯಗಳಿವೆ, ಹಾಗಾಗಿ ಹೋಗುತ್ತೇನೆ. ದಾವೋಸ್​​ಗೆ ಹೋಗೋದಕ್ಕೂ ಸಂಪುಟ ವಿಸ್ತರಣೆಗೂ ಸಂಬಂಧ ಇಲ್ಲ. ಈ ತಿಂಗಳಲ್ಲೇ ಸಂಪುಟ ವಿಸ್ತರಣೆ ಆಗಲಿದೆ. ಶಾಸಕರು ಆತಂಕ‌ ಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

For All Latest Updates

ABOUT THE AUTHOR

...view details