ಕರ್ನಾಟಕ

karnataka

ETV Bharat / state

ಮೂರೇ ತಿಂಗಳಲ್ಲಿ 8ಸಾವಿರ ಕೋಟಿ ವೆಚ್ಚದ ರಸ್ತೆ ಕಾಮಗಾರಿ: ರೇವಣ್ಣ ಭರವಸೆ - undefined

ಅಪೆಂಡಿಕ್ಸ್ ಸಿ ಯೋಜನೆಯಡಿ ಸುಮಾರು 8 ಸಾವಿರ ಕೋಟಿ ರೂ.ಅಂದಾಜು ವೆಚ್ಚದ 16,000 ಕಿ.ಮೀ ರಸ್ತೆ ಕಾಮಗಾರಿಯನ್ನು ಜುಲೈ ಮೊದಲ ವಾರದಲ್ಲಿ ಆರಂಭಿಸಲಾಗುತ್ತಿದ್ದು, ಇನ್ನು ಮೂರೇ ತಿಂಗಳಲ್ಲಿ ಕಾಮಗಾರಿ ಮುಕ್ತಾಯಗೊಳಿಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದ್ದಾರೆ

ಎಚ್.ಡಿ. ರೇವಣ್ಣ

By

Published : Jun 19, 2019, 9:14 PM IST

ಬೆಂಗಳೂರು :ಅಪೆಂಡಿಕ್ಸ್ ಸಿ ಯೋಜನೆಯಡಿ ಬಾಕಿ ಉಳಿದಿರುವ ಸುಮಾರು 8ಸಾವಿರ ಕೋಟಿ ರೂ.ಅಂದಾಜು ವೆಚ್ಚದ 16,000 ಕಿ.ಮೀ ರಸ್ತೆ ಕಾಮಗಾರಿಯನ್ನು ಜುಲೈ ಮೊದಲ ವಾರದಲ್ಲಿ ಆರಂಭಿಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದರು.

ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭವಾಗಲಿದೆ. ಮೂರು ತಿಂಗಳಲ್ಲಿ ಕಾಮಗಾರಿ ಮುಕ್ತಾಯಗೊಳಿಸಲಾಗುತ್ತದೆ. ಮೈಸೂರು - ಬೆಂಗಳೂರು ನಡುವೆ ಹತ್ತು ಪಥದ ರಸ್ತೆ ನಿರ್ಮಾಣದ ಮೊದಲ ಹಂತದ ಕಾಮಗಾರಿ ಆರಂಭವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಶೇ.100ರಷ್ಟು ಭೂಸ್ವಾಧೀನ ಮಾಡಿ ಕೊಡಲಾಗಿದೆ. ರಾಮನಗರ, ಮಂಡ್ಯ, ಮದ್ದೂರು ನಗರಗಳ್ಲಿ ಎಲಿವೇಟೆಡ್ ರಸ್ತೆ ನಿರ್ಮಾಣವಾಗಬೇಕೆಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

ನಾಡಿದ್ದು ಪ್ರಮಾಣವಚನ ಸ್ವೀಕರಿಸಲಿರುವ ಪ್ರಜ್ವಲ್ ರೇವಣ್ಣ:
ಇನ್ನು ಪ್ರಜ್ವಲ್​ ರೇವಣ್ಣ ಅವರ ಪ್ರಮಾಣವಚನ ಕುರಿತು ಪ್ರತಿಕ್ರಿಸಿದ ಅವರು, ನಾಡಿದ್ದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆರೋಗ್ಯ ಸರಿ ಇಲ್ಲದ ಕಾರಣ ಪ್ರಮಾಣವಚನ ಸ್ವೀಕಾರ ವಿಳಂಬವಾಗಿತ್ತು. ಈಗಲೂ ಸಂಸದ ಸ್ಥಾನ ಬಿಟ್ಟು ಕೊಡಲು ನಾವು ಸಿದ್ಧವಿದ್ದೇವೆ. ಆದರೆ ದೇವೇಗೌಡರು ಒಪ್ಪುತ್ತಿಲ್ಲ. ತತ್ವ ಸಿದ್ದಾಂತದ ಹಿನ್ನೆಲೆಯಿಂದ ಬಂದ ದೇವೇಗೌಡರು ನಮ್ಮನ್ನು ತಡೆಯುತ್ತಿದ್ದಾರೆ ಎಂದರು.

ಪ್ರಜ್ವಲ್ ರೇವಣ್ಣ ಮತ್ತು ನಿಖಿಲ್ ಕುಮಾರಸ್ವಾಮಿ ಈಗಲೆ ನಾಯಕತ್ವ ವಹಿಸುವುದು ಬೇಡ ಎಂಬ ವೈ.ಎಸ್.ವಿ ದತ್ತ ಹೇಳಿಕೆಯನ್ನು ಸಮರ್ಥಿಸಿದ ರೇವಣ್ಣ, ಪ್ರಜ್ವಲ್ ಮತ್ತು ನಿಖಿಲ್ ಕೂಡ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡಲಿ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾವ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತಾರೆ ಎಂದರು.

For All Latest Updates

TAGGED:

ABOUT THE AUTHOR

...view details