ಕರ್ನಾಟಕ

karnataka

ETV Bharat / state

ಮೊದಲು ವಿಶ್ವಾಸ ಮತಯಾಚನೆ, ನಂತರ ಹಣಕಾಸು ವಿಧೇಯಕ ಮಂಡನೆ: ಸಿಎಂ ಬಿಎಸ್​ವೈ

ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಸಿಎಂ ಬಿ.ಎಸ್​.ಯಡಿಯೂರಪ್ಪ, ವಿಶ್ವಾಸಮತ ಸಾಬೀತಾದ ಮೇಲೆ ಹಣಕಾಸು ವಿಧೇಯಕ ಮಂಡನೆ ಮಾಡಲಾಗುತ್ತದೆ. ನಾಳೆ ಯಾವ ರೀತಿ ಸದನದಲ್ಲಿ ಇರಬೇಕು ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

By

Published : Jul 28, 2019, 10:58 PM IST

Updated : Jul 28, 2019, 11:10 PM IST

ಸಿಎಂ ಬಿ.ಎಸ್​. ಯಡಿಯೂರಪ್ಪ

ಬೆಂಗಳೂರು: ನಾಳೆ ವಿಶ್ವಾಸಮತ ಸಾಬೀತುಪಡಿಸಿದ ನಂತರ ಹಣಕಾಸು ವಿಧೇಯಕಕ್ಕೆ ಸದನದ ಒಪ್ಪಿಗೆ ಪಡೆದು, ಮಧ್ಯಾಹ್ನ ವಿಧಾನ ಪರಿಷತ್​​​ನಲ್ಲಿ ಅಂಗೀಕಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಶಾಸಕಾಂಗ ಪಕ್ಷದ ಸಭೆ ಬಳಿಕ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಪ್ರಾರಂಭವಾಗಲಿದೆ. ವಿಶ್ವಾಸಮತ ಅನುಮೋದನೆ ಆದ ಮೇಲೆ ಹಣಕಾಸು ವಿಧೇಯಕ ಮಂಡನೆ ಮಾಡಲಾಗುತ್ತದೆ. ನಾಳೆ ಯಾವ ರೀತಿ ಸದನದಲ್ಲಿ ಇರಬೇಕು ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ ಎಂದರು.

ಸಿಎಂ ಬಿ.ಎಸ್​. ಯಡಿಯೂರಪ್ಪ

ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಭೀಕರ ಬರಗಾಲ ಇದೆ. ನಾನು ದ್ವೇಷದ ರಾಜಕಾರಣ ಮಾಡಲ್ಲ. ಕಾಂಗ್ರೆಸ್-ಜೆಡಿಎಸ್ ಎಲ್ಲರ ಸಹಕಾರ ಪಡೆದು ರಾಜ್ಯದ ಅಭಿವೃದ್ಧಿಗೆ ವಿಶೇಷ ಗಮನ ಕೊಡುತ್ತೇನೆ ಎಂದರು.

ಈಗಷ್ಟೇ ಬಿಬಿಎಂಪಿ ಆಯುಕ್ತರನ್ನು ಕರೆಸಿ ಮೂರು ದಿನಗಳೊಳಗೆ ಕಸ ವಿಲೇವಾರಿ ಮಾಡಿಸಲು ಸೂಚನೆ ಕೊಟ್ಟಿದ್ದೇನೆ. ಬೆಂಗಳೂರು ಅಭಿವೃದ್ಧಿ, ಬಿಡಿಎ, ಬಿಬಿಎಂಪಿಯಲ್ಲಿ ಯಾವ ಕೆಲಸ ಆಗ್ತಿದೆ ಎಂದು ಪರಿಶೀಲನೆ ಮಾಡುತ್ತೇನೆ ಎಂದರು.

Last Updated : Jul 28, 2019, 11:10 PM IST

ABOUT THE AUTHOR

...view details