ಕರ್ನಾಟಕ

karnataka

ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಹರಿದು ಬಂದ ಅಭಿನಂದನೆಗಳ ಮಹಾಪೂರ

By ETV Bharat Karnataka Team

Published : Jan 15, 2024, 9:06 PM IST

ರಾಜ್ಯ ಹಾಗೂ ರಾಷ್ಟ್ರೀಯ ರಾಜಕೀಯ ನಾಯಕರು ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಶಿಲ್ಪಿ ಅರುಣ್ ಯೋಗಿರಾಜ್
ಶಿಲ್ಪಿ ಅರುಣ್ ಯೋಗಿರಾಜ್

ಬೆಂಗಳೂರು : ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ 'ರಾಮಲಲ್ಲಾ' ಮೂರ್ತಿ ಆಯ್ಕೆಯಾಗಿದೆ. ಇದರ ಬೆನ್ನಲ್ಲೆ ಎಲ್ಲೆಡೆ ಅರುಣ್ ಯೋಗಿರಾಜ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಸಾಮಾಜಿಕ ಜಾಲತಾಣ ಎಕ್ಸ್​ ಆ್ಯಪ್​ನಲ್ಲಿ ಪೋಸ್ಟ್​ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ 'ರಾಮಲಲ್ಲಾ' ಮೂರ್ತಿ ಆಯ್ಕೆ ಆಗಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ @ShriRamTeerthಪ್ರಕಟಣೆ ಹೊರಡಿಸುವುದು ಕನ್ನಡಿಗರೆಲ್ಲರ ಪಾಲಿನ ಸಂಕ್ರಾಂತಿ ಸಂಭ್ರಮವನ್ನು ಇಮ್ಮಿಡಿಗೊಳಿಸಿದೆ. ರಾಮಲಲ್ಲಾ ಮೂರ್ತಿ ಅರಳಿರುವುದು ಹೆಚ್.ಡಿ ಕೋಟೆ ತಾಲೂಕಿನ ಶಿಲೆ ಎನ್ನುವ ಸಂಗತಿ ಮಂದಿರದ ಜತೆ ಕನ್ನಡಿಗರ ಶ್ರದ್ಧೆಯನ್ನು ಗಾಢಗೊಳಿಸಿದೆ. ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಅವರಿಗೆ ಆ ಶ್ರೀರಾಮ ದೇವರ ಅನುಗ್ರಹ ಸದಾ ಇರಲಿ ಹಾಗೂ ಅವರು ಇಂಥ ಇನ್ನೂ ಅನೇಕ ಮಹೋನ್ನತ ಶಿಲ್ಪಗಳನ್ನು ದೇಶಕ್ಕೆ ನೀಡಲಿ, ಅವರಿಗೆ ಎಲ್ಲವೂ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

ಕರ್ನಾಟಕದ ಹೆಮ್ಮೆಯ ಮೈಸೂರು ಮೂಲದ ಪ್ರಖ್ಯಾತ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರು ಆಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ರಾಮಮಂದಿರದ ವಿಗ್ರಹದ ಕೆತ್ತನೆ ನೆರವೇರಿಸಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದು ಸಂಸದ ಪ್ರತಾಪ್​ ಸಿಂಹ ಅಭಿನಂದಿಸಿದ್ದಾರೆ.

ಮತ್ತೊಂದೆಡೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಪೋಸ್ಟ್​ ಮಾಡಿದ್ದಾರೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ನಮ್ಮೆಲ್ಲರ ಆರಾದ್ಯ ದೈವ ಶ್ರೀರಾಮ ಲಲ್ಲಾ ಮೂರ್ತಿಯನ್ನು ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಿರುವುದು ಅತ್ಯಂತ‌ ಹೆಮ್ಮೆಯ ವಿಷಯವಾಗಿದೆ. ಕರ್ನಾಟಕಕ್ಕೂ ಶ್ರೀರಾಮನಿಗೂ ಇರುವ ನಂಟಿಗೆ ಈಗ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ಸುಂದರ ಶ್ರೀರಾಮನ ಮೂರ್ತಿ ಕೆತ್ತನೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಅಭಿನಂದನೆಗಳು, ಜೈ ಶ್ರೀ ರಾಮ ಎಂದು ಬರೆದುಕೊಂಡಿದ್ದಾರೆ.

ನಿರೀಕ್ಷೆ ಎಂಬಂತೆ ರಾಮ ಹನುಮರ ಬಾಂಧವ್ಯಕ್ಕೆ ಕನ್ನಡದ ನಂಟಿದೆ, ಕರುನಾಡ ಕಂಪಿದೆ". ಇದರ ದ್ಯೋತಕ ಎಂಬಂತೆ ಮೈಸೂರಿನ ಪ್ರತಿಭಾವಂತ ಹಾಗೂ ಕೌಶಲ್ಯ ಶ್ರದ್ಧೆಯ ಯುವ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರ ರಾಮಪ್ರೇರಣೆಯ ಕಲ್ಪನೆಯಿಂದ ಪಡಿಮೂಡಿದ ರಾಮಲಲಾನ ವಿಗ್ರಹವೇ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೊಳ್ಳುತ್ತಿರುವುದು ಸಮಗ್ರ ಕರ್ನಾಟಕದ ಹಿರಿಮೆ, ಕನ್ನಡಿಗರ ಹೆಮ್ಮೆಯಾಗಿದೆ. ಅರುಣ್ ಯೋಗಿರಾಜ್ ಮತ್ತವರ ತಂಡಕ್ಕೆ ಅನಂತ ಅಭಿನಂದನೆಗಳು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಗೌರವ ಸೂಚಿಸಿದ್ದಾರೆ.

ಇದನ್ನೂ ಓದಿ :ಭವ್ಯ ರಾಮ ಮಂದಿರದಲ್ಲಿ ಕರುನಾಡಿನ ರಾಮ; ಮೈಸೂರಿನ ಅರುಣ್​ ಯೋಗಿರಾಜ್​ ಕೆತ್ತನೆಯ ಮೂರ್ತಿ ಆಯ್ಕೆ

ABOUT THE AUTHOR

...view details