ಕರ್ನಾಟಕ

karnataka

By

Published : Aug 5, 2020, 1:36 PM IST

ETV Bharat / state

ಶಿರಾ ಶಾಸಕ ಸತ್ಯನಾರಾಯಣ ನಿಧನ: ಕಾಂಗ್ರೆಸ್ ನಾಯಕರಿಂದ ಸಂತಾಪ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶಿರಾ ಶಾಸಕ ಸತ್ಯನಾರಾಯಣ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Siddaramayya tweet
Siddaramayya tweet

ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶಿರಾ ಶಾಸಕ ಸತ್ಯನಾರಾಯಣ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿರಾ ಜೆಡಿಎಸ್ ಶಾಸಕರಾದ ಸತ್ಯನಾರಾಯಣ ಕಳೆದ ಕೆಲದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಇವರು ನಿಧನರಾಗಿದ್ದು, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ರಾಜ್ಯಸಭೆ ಸದಸ್ಯ ಜಿಸಿ ಚಂದ್ರಶೇಖರ್ ಸೇರಿದಂತೆ ಹಲವು ನಾಯಕರು ಟ್ವಿಟರ್ ಮೂಲಕ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ತಮ್ಮ ಟ್ವೀಟ್​​​ನಲ್ಲಿ, ನನ್ನ ಆತ್ಮೀಯ ಸ್ನೇಹಿತರಾದ ಶಾಸಕ ಭುವನಹಳ್ಳಿ ಸತ್ಯನಾರಾಯಣ ಅವರು ಸರಳ ವ್ಯಕ್ತಿತ್ವ, ಸಜ್ಜನಿಕೆಯ ನಡವಳಿಕೆಯ ಸ್ನೇಹಜೀವಿಯಾಗಿದ್ದರು. ಅವರ ಅಕಾಲಿಕ‌ ಸಾವಿನಿಂದಾಗಿ ನನಗೆ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ‌ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದು, ಮಾಜಿ ಸಚಿವ ಹಾಗೂ ಶಿರಾ ಕ್ಷೇತ್ರದ ಹಾಲಿ ಶಾಸಕರಾದ ಬಿ. ಸತ್ಯನಾರಾಯಣ ಅವರ ಸಾವಿನ ಸುದ್ದಿ ತೀವ್ರ ದುಃಖಕರ ಸಂಗತಿ. ಸತ್ಯನಾರಾಯಣ ಅವರ ಸಾವು ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ಹಿರಿಯ ಮುತ್ಸದ್ದಿ ಹಾಗೂ ಜೆಡಿಎಸ್ ಪಕ್ಷದ ಶಿರಾ ಕ್ಷೇತ್ರದ ಶಾಸಕರಾದ ಬಿ.ಸತ್ಯ ನಾರಾಯಣ ಅನಾರೋಗ್ಯದಿಂದ ನಮ್ಮನ್ನಗಲಿ ಹೋಗಿದ್ದಾರೆ. ಅವರ ಅಕಾಲಿಕ ಸಾವು ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಸತ್ಯನಾರಾಯಣ ಅವರ ಸಾವಿನ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಶಿರಾ ಕ್ಷೇತ್ರದ ಶಾಸಕರಾದ ಬಿ. ಸತ್ಯನಾರಾಯಣ ಅವರು ವಿಧಿವಶರಾಗಿರುವುದು ಅತ್ಯಂತ ನೋವಿನ ಸಂಗತಿ. ಅವರ ಕುಟುಂಬ ವರ್ಗದವರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಾಜಿ ಡಿಸಿಎಂ ಜಿ. ಪರಮೇಶ್ವರ್ ತಮ್ಮ ಟ್ವೀಟ್​​ನಲ್ಲಿ, ತುಮಕೂರು ಶಿರಾ ಶಾಸಕರಾದ ಸತ್ಯನಾರಾಯಣ ಅವರ ನಿಧನ ದುರಾದೃಷ್ಟಕರ. ಅವರ ಕುಟುಂಬಕ್ಕೆ ಈ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.


ರಾಜ್ಯಸಭೆ ಸದಸ್ಯ ಜಿಸಿ ಚಂದ್ರಶೇಖರ್ ತಮ್ಮ ಟ್ವೀಟ್ ನಲ್ಲಿ, ಶಿರಾ ಕ್ಷೇತ್ರದ ಶಾಸಕರಾದ ಬಿ. ಸತ್ಯನಾರಾಯಣ ಅವರ ಸಾವಿನ ಸುದ್ದಿ ತೀವ್ರ ದುಃಖಕರ ಸಂಗತಿ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ABOUT THE AUTHOR

...view details