ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರದ ಗೊಂದಲವನ್ನು ವಿವರಿಸುವ ಅಗತ್ಯವಿಲ್ಲ, ಏನೂ ಹೇಳಲಿಕ್ಕಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೌನ ವಹಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸಗಳಿಂದ ಹೊರಟ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ಗೆ ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಇಬ್ಬರಿಂದಲೂ ಸಮರ್ಪಕ ಉತ್ತರ ಸಿಕ್ಕಿಲ್ಲ. ಈ ಮೂಲಕ ಯುವ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಇನ್ನೂ ಒಂದಿಷ್ಟು ಗೊಂದಲ ಇದೆ ಎನ್ನುವುದು ಸ್ಪಷ್ಟವಾಗಿದೆ.
ಶಿವಾನಂದ ವೃತ್ತದ ತಮ್ಮ ಸರ್ಕಾರಿ ನಿವಾಸದಿಂದ ಹೊರಟ ಸಿದ್ದರಾಮಯ್ಯಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ವಿವಾದ ವಿಚಾರ ಕುರಿತು ಕೇಳಲಾದ ಪ್ರಶ್ನೆಗೆ, ನಾನು ಕೊಟ್ಟಿರುವ ಸಲಹೆಯನ್ನು ನಿಮಗೆ ಹೇಳಲಿಕ್ಕಾಗಲ್ಲ. ಅವರಿಗೆ ಹೇಳಿರೋದನ್ನು ನಿಮಗೆ ಹೇಗೆ ತಿಳಿಸಲಿ? ಅವರು ಎಲೆಕ್ಷನ್ ಆಫೀಸರ್ ಏನೋ ಒಂದು ಕಾಂಪ್ರಮೈಸ್ ಮಾಡ್ತೀವಿ ಅಂತ ಹೇಳಿದ್ದಾರೆ. ಇಬ್ಬರನ್ನೂ ಕೂರಿಸಿಕೊಂಡು ಕಾಂಪ್ರಮೈಸ್ ಮಾಡಿ ಅಂತ ಹೇಳಿದ್ದೀನಿ ಎಂದರು. ಇನ್ನೂ ಆರು ತಿಂಗಳು ಮಾತ್ರ ರಕ್ಷಾ ರಾಮಯ್ಯ ಅನ್ನೋ ವಿಚಾರ ಗೊತ್ತಿಲ್ಲ ಎಂದ ಸಿದ್ದರಾಮಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷರ ಸ್ಥಾನದ ಕುರಿತು ಸ್ಪಷ್ಟವಾದ ಮಾಹಿತಿಯನ್ನು ನೀಡಲಿಲ್ಲ.
ಪ್ರತಿಕ್ರಿಯೆಗೆ ನಕಾರ: