ಕರ್ನಾಟಕ

karnataka

By

Published : Sep 5, 2019, 11:54 PM IST

ETV Bharat / state

ಡಿಕೆಶಿ ವಿರುದ್ಧ ಸೇಡಿನ ರಾಜಕಾರಣ ನಡೆಯುತ್ತಿದೆ: ಟ್ವೀಟ್ ಗಳ ಮೂಲಕ ಕಾಂಗ್ರೆಸ್​​ ಆರೋಪ..

ಮಾಜಿ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.ಈ ಸಂಬಂಧ ಇಂದು ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಆರೋಪಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಾತುಗಳನ್ನು ಕೋಟ್ ಮಾಡಿ ಟ್ವೀಟ್ ಮಾಡಲಾಗಿದೆ.

ಡಿಕೆ ಶಿವಕುಮಾರ್ ವಿರುದ್ಧ ಸೇಡಿನ ರಾಜಕಾರಣ ನಡೆಯುತ್ತಿದೆ ಎಂದ ಕಾಂಗ್ರೆಸ್; ಟ್ವೀಟ್ ಗಳ ಮೂಲಕ ಆರೋಪ

ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.ಈ ಸಂಬಂಧ ಇಂದು ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಆರೋಪಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಾತುಗಳನ್ನು ಕೋಟ್ ಮಾಡಿ ಟ್ವೀಟ್ ಮಾಡಲಾಗಿದೆ.

ದಿನೇಶ್ ಗುಂಡೂರಾವ್ ಪ್ರತಿಕ್ರಿಯೆಯಾಗಿ, ಅಕ್ರಮ ಮಾಡಿರುವವರು ಬಿಜೆಪಿ ಸೇರಿದರೆ ಸಾಚಾಗಳಾಗುತ್ತಾರೆ. ಅವರ ವಿರುದ್ಧ ಏನೂ ಕ್ರಮ ಕೈಗೊಳ್ಳಲಾಗುವುದಿಲ್ಲ. ಡಿಕೆ ಶಿವಕುಮಾರ್ ಅವರಿಗೂ ಬಿಜೆಪಿ ಸೇರಲು ಒತ್ತಡ ಹಾಕಲಾಗಿದೆ. ಆದರೆ, ಅವರು ನಿರಾಕರಿಸಿದ ಬಳಿಕ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಅವರು ಕಾನೂನು ಹೋರಾಟ ಮಾಡುತ್ತಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ ಎಂದಿರುವ ಮಾತನ್ನು ಟ್ವೀಟ್ ರೂಪದಲ್ಲಿ ಪ್ರಕಟಿಸಲಾಗಿದೆ.

ರಾಹುಲ್ ಮಾತು

ಡಿಕೆ ಶಿವಕುಮಾರ್, ಅವರ ಬಂಧನವು ಕೇಂದ್ರ ಸರ್ಕಾರದ ಪ್ರತೀಕಾರದ ರಾಜಕಾರಣವಾಗಿದೆ. ಸರ್ಕಾರದ ವಿಫಲ ನೀತಿಗಳಿಂದ ಹಾಗೂ ದೇಶದ ಶೋಚನೀಯ ಆರ್ಥಿಕ ಪರಿಸ್ಥಿತಿಯಿಂದ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಇದು. ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುವುದನ್ನು ಬಿಟ್ಟರೆ ಜಾರಿ ನಿರ್ದೇಶನಾಲಯಕ್ಕೆ ಇನ್ನೇನು ಮಾಡಲು ಸಾಧ್ಯ? ಎಂದಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಾಹಿತಿಯನ್ನು ಪ್ರಕಟಿಸಲಾಗಿದೆ.

ಸೋನಿಯಾ ಗಾಂಧಿ ಹೇಳಿಕೆ

ಡಿ.ಕೆ ಶಿವಕುಮಾರ್ ಅವರನ್ನು ರಾಜಕೀಯ ಷಡ್ಯಂತ್ರದಲ್ಲಿ ಸಿಲುಕಿಸಲಾಗಿದೆ. ಬಿಜೆಪಿ ವಿರೋಧ ಪಕ್ಷಗಳ ನಾಯಕರನ್ನು ಮಟ್ಟಹಾಕಲು ದ್ವೇಷದ ರಾಜಕಾರಣ ಮಾಡುತ್ತಿದೆ. ಡಿಕೆಶಿ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ. ಈ ಸಮಯದಲ್ಲಿ ಅವರ ಜೊತೆ ನಾವು ಹಾಗೂ ಕಾಂಗ್ರೆಸ್ ಪಕ್ಷ ನಿಲ್ಲಲಿದೆ ಎಂದಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿಕೆಯನ್ನು ಪ್ರಕಟಿಸಲಾಗಿದೆ.

ಮಾರುತಿ ಆರ್ಥಿಕ ಬಿಕ್ಕಟ್ಟು ಪ್ರಸ್ತಾಪ

ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಕಾರು ಉತ್ಪಾದಕ ಕಂಪನಿ ಮಾರುತಿ, 2 ದಿನಗಳ ಉತ್ಪಾದನಾ ಸ್ಥಗಿತಕ್ಕೆ ನಿರ್ಧರಿಸಿದೆ ಈಗಾಗಲೇ ಶೇ.33.99 ರಷ್ಟು ಇರುವ ಉತ್ಪಾದನಾ ಇಳಿಕೆ, ಸತತ 7ನೇ ತಿಂಗಳಿಗೂ ಮುಂದುವರೆದಿದೆ. ಪ್ರಧಾನಿ ನರೇಂದ್ರ ಮೋದಿಯ ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ಸೃಷ್ಟಿಸಲ್ಪಟ್ಟ ಸಂಕಷ್ಟ ಇದಾಗಿದ್ದು, ಮುಂದಿನ ದಿನಗಳು ಇನ್ನೂ ಕರಾಳವಾಗಿರಲಿವೆ ಎಂದು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.

ABOUT THE AUTHOR

...view details