ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರದ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ: ಕಾಂಗ್ರೆಸ್ ಪ್ರತಿಭಟನೆ - ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಆರೋಗ್ಯ ಇಲಾಖೆಯಲ್ಲಿ ಕೋಟ್ಯಂತರ ಅವ್ಯವಹಾರ ನೆಡೆದಿದೆ. ಸಾರಿಗೆ ಇಲಾಖೆ ಇದ್ದೂ ಸತ್ತಂತೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಗಲು ದರೋಡೆ ನೆಡೆಯುತ್ತಿದೆ. ಕಂದಾಯ ಇಲಾಖೆಯಲ್ಲಿ ನಿತ್ಯವೂ ವಸೂಲಿ ನೆಡೆಯುತ್ತಿದೆ. ಹೀಗೆ ಪ್ರತಿ ಇಲಾಖೆಯಲ್ಲೂ ಸಹ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಈ ಬಿಜೆಪಿ ಸರ್ಕಾರ ಲಂಚ ಪಡೆಯುವ ಸರ್ಕಾರ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಕಾಂಗ್ರೆಸ್ ಪ್ರತಿಭಟನೆ
ಕಾಂಗ್ರೆಸ್ ಪ್ರತಿಭಟನೆ

By

Published : Mar 22, 2022, 9:08 PM IST

ಬೆಂಗಳೂರು:ರಾಜ್ಯ ಬಿಜೆಪಿ ಸರ್ಕಾರ ಪ್ರತಿ ನಿತ್ಯ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರವನ್ನು ದಾಖಲೆ ಮಟ್ಟದಲ್ಲಿ ಮಾಡಿ ಸಾರ್ವಜನಿಕರ ಹಣವನ್ನು ಲೂಟಿ ಮಾಡುತ್ತಿದೆ. ದಿನನಿತ್ಯವೂ ಪ್ರತಿ ಇಲಾಖೆಯ ಭ್ರಷ್ಟಾಚಾರದ ಕರ್ಮಕಾಂಡ ಬಹಿರಂಗವಾಗುತ್ತಿದೆ. ಮುಖ್ಯಮಂತ್ರಿಗಳು ಯಾವುದೇ ತನಿಖೆಗೆ ಮುಂದಾಗದೇ ಮೌನಕ್ಕೆ ಶರಣಾಗಿದ್ದರೆ ಎಂದು ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಬಳಿ ಮಂಗಳವಾರ ಪ್ರತಿಭಟನೆ ನಡೆಸಿತು.

ಪ್ರತಿ ಇಲಾಖೆಯಿಂದಲೂ ಮುಖ್ಯಮಂತ್ರಿ ವಾಮಮಾರ್ಗದಿಂದ ಹಣ ಪಡೆಯುತ್ತಿದ್ದಾರೆ ಎಂಬುದನ್ನು ರಾಜ್ಯದ ಜನತೆ ಮುಂದೆ ಬಹಿರಂಗ ಪಡಿಸಬೇಕು. ಬಿಜೆಪಿಯ ಭ್ರಷ್ಟಾಚಾರವನ್ನು ಮರೆಮಾಚಲು ಕಾಶ್ಮೀರ್ ಫೈಲ್ಸ್ ಎಂಬ ಚಲನ ಚಿತ್ರವನ್ನು ವೀಕ್ಷಿಸುವ ಮೂಲಕ, ರಾಜ್ಯದ ಜನತೆಯ ಸಂಕಷ್ಟವನ್ನು ಅರಿಯದ ನಿರ್ಲಕ್ಷ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ಕಾರ್ಯಕರ್ತರು ದೂರಿದರು. ಆರೋಗ್ಯ ಇಲಾಖೆಯಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದೆ. ಸಾರಿಗೆ ಇಲಾಖೆ ಇದ್ದೂ ಸತ್ತಂತೆ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಗಲು ದರೋಡೆ ನಡೆಯುತ್ತಿದೆ. ಕಂದಾಯ ಇಲಾಖೆಯಲ್ಲಿ ನಿತ್ಯವೂ ವಸೂಲಿ ನಡೆಯುತ್ತಿದೆ. ಹೀಗೆ ಪ್ರತಿ ಇಲಾಖೆಯಲ್ಲೂ ಸಹ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಬಿಜೆಪಿ ಸರ್ಕಾರ ಲಂಚ ಪಡೆಯುವ ಸರ್ಕಾರ ಎಂಬುದು ಈಗ ಜನತೆಗೆ ತಿಳಿಯುತ್ತಿದೆ. ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸದೆ ಧಾರ್ಮಿಕ ಹಾಗೂ ಭಾವನಾತ್ಮಕ ವಿಷಯಗಳನ್ನು ಕೆದಕಿ ಕೋಮುವಾದವನ್ನು ಸೃಷ್ಟಿಸುವುದೇ ಬಿಜೆಪಿ ಸರ್ಕಾರದ ಒಂದಂಶದ ಕಾರ್ಯಕ್ರಮವಾಗಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಹಣ ನೀಡಿಲ್ಲ:ಬೆಂಗಳೂರು ನಗರದ ಉಸ್ತುವಾರಿ ಆಗಿರುವ ಮುಖ್ಯಮಂತ್ರಿಗಳು, ಬಿಜೆಪಿ ಸದಸ್ಯರಿಗೆ ಅನುದಾನ ನೀಡಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಹಣ ನೀಡದೆ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಬಿಜೆಪಿ ಶಾಸಕರ ಅಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದರು.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ:ಬಿಜೆಪಿ ಪಕ್ಷದ ನಾಯಕರು ಹಾಗೂ ಶಾಸಕರು ಭ್ರಷ್ಟಾಚಾರದ ಬಗ್ಗೆ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿರ್ಮೂಲನೆ ಮಾಡದೇ ಹೋದರೆ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿ ತೊಲಗಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.

ABOUT THE AUTHOR

...view details