ಬೆಂಗಳೂರು: ಕೇಂದ್ರದ ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್ ನಿನ್ನೆ ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಸಂಸ್ಥೆಗೆ ಯುವ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.
ಡಿ.4 ರಂದು ವಿಜಯಪುರ ಜಿಲ್ಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಧ್ಯಮಗಳೊಂದಿಗೆ ಹೇಳಿಕೆ ನೀಡುವಾಗ ಬಿಜೆಪಿ ಪಕ್ಷದ ಶಾಸಕರೊಬ್ಬರನ್ನು ಮಂತ್ರಿ ಮಾಡಲು ಮಾಜಿ ಮುಖ್ಯಮಂತ್ರಿಗಳು, ಶಾಸಕರಾದ ಯಡಿಯೂರಪ್ಪನವರಿಂದ 10 ಕೋಟಿ ಹಣ ಪಡೆದಿರುವುದಾಗಿ ನೇರ ಆರೋಪ ಮಾಡಿದ್ದಾರೆ.