ಕರ್ನಾಟಕ

karnataka

ರಾಜ್ಯ ಕೈ ಉಸ್ತುವಾರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಪಟ್ಟು, ಮುನಿಯಪ್ಪ ಬೆಂಬಲಿತ ಏಳು ಸ್ಥಳೀಯ ನಾಯಕರ ಅಮಾನತು!

ಕೆ.ಹೆಚ್. ಮುನಿಯಪ್ಪ ಬೆಂಬಲಿಗರಾದ ಈ ಏಳು ಮಂದಿ ಸ್ಥಳೀಯ ನಾಯಕರು ನಿನ್ನೆ ಸುದ್ದಿಗೋಷ್ಠಿ ನಡೆಸಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ‌‌.ವೇಣುಗೋಪಾಲ್ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್​ರನ್ನು ಬದಲಾಯಿಸಬೇಕೆಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಈ ಏಳು ಮಂದಿ ಸ್ಥಳೀಯ ಕೈ ನಾಯಕರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

By

Published : Oct 18, 2019, 7:18 PM IST

Published : Oct 18, 2019, 7:18 PM IST

ಕೆ.ಹೆಚ್.ಮುನಿಯಪ್ಪ ಬೆಂಬಲಿಗರಾದ ಕೋಲಾರದ ಏಳು ಸ್ಥಳೀಯ ನಾಯಕರ ಅಮಾನತು

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಉಸ್ತುವಾರಿಕೆ.ಸಿ.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಹೇಳಿಕೆ ನೀಡಿದ ಕೆ.ಹೆಚ್. ಮುನಿಯಪ್ಪ ಬೆಂಬಲಿಗರಾದ ಕೋಲಾರ ಜಿಲ್ಲಾ ಸ್ಥಳೀಯ ನಾಯಕರನ್ನು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೆ.ಹೆಚ್.ಮುನಿಯಪ್ಪ ಬೆಂಬಲಿಗರಾದ ಕೋಲಾರದ ಏಳು ಸ್ಥಳೀಯ ನಾಯಕರ ಅಮಾನತು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಕೋಲಾರದ ಏಳು ಮಂದಿ ಸ್ಥಳೀಯ ಕೈ ನಾಯಕರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಅದರಂತೆ ಕೋಲಾರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಸಾದ್ ಬಾಬು, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಅತವುಲ್ಲಾ, ಕೋಲಾರ ಡಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಇಕ್ಬಾಲ್‌ ಅಹಮದ್, ಕೋಲಾರ ಡಿಸಿಸಿ ಎಸ್.ಸಿ.ವಿಭಾಗ ಅಧ್ಯಕ್ಷ ಕೆ.ಜಯದೇವ, ಕೋಲಾರ ಡಿಸಿಸಿ ಎಸ್‌ಟಿ ವಿಭಾಗದ ಅಧ್ಯಕ್ಷ ನಾಗರಾಜ್ ಹಾಗು ಎಲ್.ಕಲೀಲ್​​ರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಂದು ಪರಿಗಣಿಸಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ ಬೆಂಬಲಿಗರಾದ ಈ ಏಳು ಸ್ಥಳೀಯ ನಾಯಕರು ನಿನ್ನೆ ಸುದ್ದಿಗೋಷ್ಠಿ ನಡೆಸಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ‌‌.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್​ರನ್ನು ಬದಲಾಯಿಸಬೇಕೆಂದು ಹೇಳಿಕೆ ನೀಡಿದ್ದರು.

ಈ ಹಿನ್ನೆಲೆ ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಏಳು ಮಂದಿ ಸ್ಥಳೀಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಪತ್ರ ಬರೆದಿದ್ದರು.ಇದೇ ವಿಚಾರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆ.ಹೆಚ್. ಮುನಿಯಪ್ಪ ತಮ್ಮ ಬೆಂಬಲಿಗರನ್ನು ಅಮಾನತು ಮಾಡುವ ಬಗ್ಗೆ ದಿನೇಶ್ ಗುಂಡೂರಾವ್ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು. ದಿನೇಶ್ ಗುಂಡೂರಾವ್ ವಿರುದ್ಧ ಕೂಗಾಡಿದ ಮುನಿಯಪ್ಪ ಬೇಸರದಿಂದ ಹೊರ ನಡೆದಿದ್ದರು.

ABOUT THE AUTHOR

...view details