ಕರ್ನಾಟಕ

karnataka

ETV Bharat / state

ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಎಸ್​ವೈ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ - ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್

ಮಹಾರಾಷ್ಟ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ನೀರನ್ನು ಮಹಾರಾಷ್ಟ್ರಕ್ಕೆ ಹರಿಸುವುದಾಗಿ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಪಕ್ಷದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಹಾರಾಷ್ಟ್ರ ವಿಧಾನ ಸಭೆ ಚುನಾವಣಾ ಪ್ರಚಾರಸಭೆಯಲ್ಲಿ ಬಿಎಸ್ವೈ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

By

Published : Oct 17, 2019, 6:17 PM IST

Updated : Oct 17, 2019, 7:04 PM IST

ಬೆಂಗಳೂರು: ಮಹಾರಾಷ್ಟ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ರಾಜ್ಯದ ನೀರನ್ನು ಮಹಾರಾಷ್ಟ್ರಕ್ಕೆ ಹರಿಸುವುದಾಗಿ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಪಕ್ಷದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಸಂಬಂಧ ಆಕ್ರೋಶ ವ್ಯಕ್ತವಾಗಿದ್ದು, ಯಡಿಯೂರಪ್ಪನವರೇ, ರಾಜ್ಯದ ಹಿತವನ್ನು ಮರೆತು ಮತಗಳಿಗಾಗಿ ಮಹಾರಾಷ್ಟ್ರಕ್ಕೆ ನೀರು ಕೊಡುತ್ತೇವೆಂದು ಹೇಳಿದ್ದು ರಾಜ್ಯಕ್ಕೆ ಮಾಡಿದ ದ್ರೋಹ. ಈಗಾಗಲೇ ಮಹದಾಯಿ ವಿಷಯದಲ್ಲಿ ಬಿಜೆಪಿಯ ಬೇಜವಾಬ್ದಾರಿತನದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಬರೆದುಕೊಂಡಿದೆ

ಮುಖ್ಯಮಂತ್ರಿಯಾಗಿ ಈ ನಿಮ್ಮ ನಡೆ ಖಂಡನೀಯ, ನಿಮ್ಮ ಹೇಳಿಕೆ ವಾಪಸ್ ಪಡೆಯಿರಿ, ರಾಜ್ಯದ ಜನತೆಯಲ್ಲಿ ಕ್ಷಮೆ ಯಾಚಿಸಿ ಎಂದು ಆಗ್ರಹಿಸಿದೆ.

ಬಿಎಸ್​​ವೈ ಏನು ಹೇಳಿದ್ದರು?

ಮಹದಾಯಿ ಹಾಗೂ ಕೃಷ್ಣಾ ನದಿ ನೀರು ಹಂಚಿಕೆ ವಿವಾದ ಇರುವಾಗಲೇ ಕರ್ನಾಟಕದ ತುಬಚಿ ಬಬಲೇಶ್ವರ ಏತ ನೀರಾವರಿ ಯೋಜನೆಯ ನೀರನ್ನ ಬೋರಾ ನದಿಗೆ ಹರಿಸಲು ಬಿಎಸ್​ವೈ ಚಿಂತನೆ ನಡೆಸಿದ್ದಾರೆ. ಈ ಸಂಬಂಧ ಇಂದು ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ವಿಚಾರ ಪ್ರಸ್ತಾಪಿಸಿದ್ದರು.

Last Updated : Oct 17, 2019, 7:04 PM IST

ABOUT THE AUTHOR

...view details