ಕರ್ನಾಟಕ

karnataka

ETV Bharat / state

ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ತಕ್ಕ ಉತ್ತರ: ಅರುಣ್ ಸಿಂಗ್ - ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್

ಕಾಂಗ್ರೆಸ್ ಪಕ್ಷದಲ್ಲಿ ತಾಕತ್ತು ಉಳಿದಿಲ್ಲ. ಆ ಪಕ್ಷ ಸಂಪೂರ್ಣ ದುರ್ಬಲವಾಗಿದೆ. ಆದ್ದರಿಂದ ಕರ್ನಾಟಕದಲ್ಲಿ ಗೆಲ್ಲುವ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಯಾವುದೇ ಮಹತ್ವ ಇಲ್ಲ ಎಂದು ಬಿಜೆಪಿ ನಾಯಕ ಅರುಣ್‌ ಸಿಂಗ್ ಟೀಕಿಸಿದರು.

EtBefitting response from people to Congress party for insulting Hindus: Arun Singh
Etಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ತಕ್ಕ ಉತ್ತರ: ಅರುಣ್ ಸಿಂಗ್

By

Published : Nov 8, 2022, 10:10 AM IST

ಬೆಂಗಳೂರು: "ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನತೆ ಯಾವತ್ತೂ ಕ್ಷಮಿಸುವುದಿಲ್ಲ. ಅವರಿಗೆ ಜನರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸರಿಯಾದ ಉತ್ತರ ಕೊಡಲಿದ್ದಾರೆ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದರು.

ಕುಮಾರಕೃಪಾ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷವು ಪ್ರತಿ ಬಾರಿ ನಮ್ಮ ಪ್ರಾಚೀನ, ಶ್ರೇಷ್ಠ ಸಂಸ್ಕೃತಿ ಮತ್ತು ಧರ್ಮವನ್ನು ಹೀಯಾಳಿಸುವ ಕೆಲಸ ಮಾಡುತ್ತಲೇ ಇದೆ. ಈ ರೀತಿಯ ನಿಂದನೆ ಅಕ್ಷಮ್ಯ. ಸತೀಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪಕ್ಷ ಕ್ರಮ ತೆಗೆದುಕೊಳ್ಳಬೇಕು. ಇಲ್ಲವೇ ಅವರಿಂದ ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ರಾಹುಲ್ ಗಾಂಧಿ, ಸ್ಥಳೀಯರೇ ಆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ಹಿಂದೂಗಳ ಅವಹೇಳನವನ್ನು ಸಮರ್ಥಿಸಿದಂತೆ ಆಗುತ್ತದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರೆದು ಮಾತನಾಡುತ್ತಾ, "ಕಾಂಗ್ರೆಸ್ ಪಕ್ಷದಲ್ಲಿ ತಾಕತ್ತು ಉಳಿದಿಲ್ಲ. ಆ ಪಕ್ಷ ಸಂಪೂರ್ಣ ದುರ್ಬಲವಾಗಿದೆ. ಆದ್ದರಿಂದ ಕರ್ನಾಟಕದಲ್ಲಿ ಗೆಲ್ಲುವ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಯಾವುದೇ ಮಹತ್ವ ಇಲ್ಲ. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿಲ್ಲ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲೂ ಸೋಲಲಿದೆ. ಎಲ್ಲೆಡೆ ಬಿಜೆಪಿ ಗೆಲ್ಲುತ್ತಾ ಸಾಗಲಿದೆ. ಕರ್ನಾಟಕದಲ್ಲೂ ಬಿಜೆಪಿ ಜಯ ಸಾಧಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ:ಹಿಂದೂ ನಮ್ಮ‌ ಶಬ್ದ ಅಲ್ಲವೇ ಅಲ್ಲ : ಸತೀಶ ಜಾರಕಿಹೊಳಿ‌

ABOUT THE AUTHOR

...view details