ಬೆಂಗಳೂರು: ಮೈಸೂರು ರಸ್ತೆಯ ಕೆಆರ್ ಮಾರುಕಟ್ಟೆ ವಾರ್ಡ್- 139ನ ಆನಂದಪುರದಲ್ಲಿ ಕೊರೊನಾ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದು,ಪರಿಣಾಮ ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹ್ಮದ್ ಹಾಗೂ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ವಾರ್ಡ್ನಲ್ಲಿ ಇಂದು ಕೋವಿಡ್ಗೆ ಮೂವರು ಬಲಿಯಾಗಿದ್ದು, ಆರು ಜನ ಸೋಂಕಿತರಿದ್ದಾರೆ. ಈ ಹಿನ್ನೆಲೆ ಆನಂದಪುರಂ ಸ್ಲಂ ಅನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಪ್ರದೇಶದಲ್ಲಿ 700 ಮನೆಗಳಿದ್ದು, ನಾಲ್ಕು ಸಾವಿರ ಜನ ವಾಸಿಸುತ್ತಿದ್ದಾರೆ. ಈಗಾಗಲೇ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಜನರಿಗೆ ಮಾಸ್ಕ್ ಹಾಗೂ ದೈಹಿಕ ಅಂತರ ಕಾಪಾಡುವಂತೆ ಜಾಗೃತಿ ಮೂಡಿಸಲಾಗಿದೆ.