ಕರ್ನಾಟಕ

karnataka

By

Published : Oct 25, 2020, 5:06 PM IST

ETV Bharat / state

ಆಯುಧಪೂಜೆ ಸಂಭ್ರಮದಲ್ಲಿ ಕೋವಿಡ್ ನಿಯಮ ಮೀರಿದ ಕೊರೊನಾ ವಾರಿಯರ್ಸ್

ಹಬ್ಬದ ಸಂಭ್ರಮದಲ್ಲಿ ಕಾಟನ್ ಪೇಟೆ ಪೊಲೀಸರು ಕೋವಿಡ್ ನಿಯಮ ಗಾಳಿಗೆ ತೂರಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆಗೆ ಗುರಿಯಾಗಿದ್ದಾರೆ.

Covid rules
ಆಯುಧಪೂಜೆ ಸಂಭ್ರಮ

ಬೆಂಗಳೂರು:ಕೊರೊನಾ ವಾರಿಯರ್ಸ್​ರಿಂದಲೇ ಕೋವಿಡ್ ನಿಯಮ ಉಲ್ಲಂಘನೆಯಾಗಿರುವ ಘಟನೆ ನಗರದ ಕಾಟಲ್ ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆಯುಧಪೂಜೆ ಸಂಭ್ರಮದಲ್ಲಿದ್ದ ಸಿಬ್ಬಂದಿ ಮಾಸ್ಕ್ ಧರಿಸದೆ, ದೈಹಿಕ ಅಂತರ ಮರೆತು ಒಟ್ಟಾಗಿ ಪಾಲ್ಗೊಂಡಿದ್ದರು.

ರಸ್ತೆ ಬ್ಲಾಕ್ ಮಾಡಿ ಫೋಟೋ ಶೂಟ್ ಮಾಡಿಕೊಂಡಿದ್ದಾರೆ. ಈ ಮೂಲಕ ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿದ್ದಾರೆ.

ಕೋವಿಡ್ ನಿಯಮ ಉಲ್ಲಂಘಿಸಿದ ಕೊರೊನಾ ವಾರಿಯರ್ಸ್

ಕೋವಿಡ್ ವ್ಯಾಪಿಸುತ್ತಿರುವ ಈ ಸಮಯದಲ್ಲಿ ನಿಯಮ ಪಾಲಿಸುವಂತೆ ಕೇಂದ್ರ, ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿವೆ. ಅಲ್ಲದೆ, ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವಂತೆ ವಾರಿಯರ್ಸ್​​ರನ್ನೂ ನೇಮಿಸಿದೆ. ಇಂಥ ಸಂದರ್ಭದಲ್ಲಿ ಪೊಲೀಸರೇ ನಿಯಮ ಉಲ್ಲಂಘಿಸಿರೋದು, ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆಗೆ ಒಳಗಾಗಿದೆ. ಸಾಮಾನ್ಯರಿಗೊಂದು ನ್ಯಾಯ, ಪೊಲೀಸರಿಗೆ ಒಂದು ನ್ಯಾಯನಾ? ಅಂತಾ ಜನತೆ ಪ್ರಶ್ನಿಸುತ್ತಿದ್ದಾರೆ.

ABOUT THE AUTHOR

...view details