ಕರ್ನಾಟಕ

karnataka

ETV Bharat / state

ನಾಳೆಯಿಂದ ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ - ನಾಳೆಯಿಂದ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ವಿತರಣೆ

ರಾಜ್ಯದಲ್ಲಿ ಕೋವಿಡ್​ ಪ್ರಂಟ್​ಲೈನ್​ನಲ್ಲಿ ನಿಂತು ಕೆಲಸ ಮಾಡಿದ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇದರ ಜೊತೆಗೆ ನಾಳೆಯಿಂದ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ಸೂಚಿಸಲಾಗಿದೆ.

ಕೋವಿಡ್ ಲಸಿಕೆ
covid vaccine

By

Published : Feb 7, 2021, 1:19 PM IST

ಬೆಂಗಳೂರು:ರಾಜ್ಯದಲ್ಲಿ ಈಗಾಗಲೇ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್​​ ಲಸಿಕೆ ನೀಡಲಾಗುತ್ತಿದೆ. ‌ಇದೀಗ ಮುಂದಿನ‌ ಹೆಜ್ಜೆಯಾಗಿ ನಾಳೆಯಿಂದ ಫೆ. 10ರವರೆಗೆ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ಸೂಚಿಸಲಾಗಿದೆ.

ಗೃಹ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ ವರ್ಗಕ್ಕೆ ಕೊರೊನಾ ಲಸಿಕೆ ನೀಡಲಾಗುತ್ತದೆ. ಇದರ ಜೊತೆಗೆ ಸಿಬ್ಬಂದಿಗೆ ಕೋವಿಡ್ ವ್ಯಾಕ್ಸಿನ್‌ ನೀಡಲು ಆದೇಶಿಸಲಾಗಿದೆ.

ಓದಿ: ಕಟ್ಟುಪಾಡುಗಳನ್ನು ಮೆಟ್ಟಿ ನಿಂತ ಜೋಗತಿ ಮಂಜಮ್ಮ.. ಜೀವನ-ಸಾಧನೆಯ ಕಿರುನೋಟ..

ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಆರ್​​ಸಿಹೆಚ್ ಅಧಿಕಾರಿಗಳು, ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾರಿಗಳು ಹೆಚ್ಚು ವ್ಯಾಕ್ಸಿನೇಷನ್​​​ಗೆ ಶೆಡ್ಯೂಲ್ ಮಾಡಿ ಮೂರು ದಿನದೊಳಗೆ ಸಂಪೂರ್ಣಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ.

ABOUT THE AUTHOR

...view details