ಕರ್ನಾಟಕ

karnataka

By

Published : Aug 18, 2019, 12:41 PM IST

ETV Bharat / state

ಸಿಸಿಬಿ ಕಾರ್ಯಾಚರಣೆ: ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರ ಬಂಧನ

ನಗರದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನೂತನ ಅಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಸಿಸಿಬಿ ಪೊಲೀಸರು ಫುಲ್ ಆ್ಯಕ್ಟಿವ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇಬ್ಬರ ಬಂಧನ

ಬೆಂಗಳೂರು:ಸಿಸಿಬಿ ಪೊಲೀಸರು ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಬಗ್ಗು ಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಮಹೇಶ್ ಹಾಗೂ ಹರೀಶ್ ಬಂಧಿತ ಆರೋಪಿಗಳು. ಬನಶಂಕರಿ ಬಳಿ ಮಹೇಶ್ ಮನೆ ಹೊಂದಿದ್ದ. ಹಾಗೆಯೇ ಹರೀಶ್ ದಾಸರಹಳ್ಳಿ ಬಳಿ ಮನೆ ಹೊಂದಿದ್ದ. ಹಲವಾರು ಜನರನ್ನ ಸೇರಿಸಿಕೊಂಡು ಮೊಬೈಲ್​ ಮೂಲಕ ಬೆಟ್ಟಿಂಗ್ ದಂಧೆ ಮಾಡುತ್ತಿದ್ದರು. ಈ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದ್ದು, ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂದಿತ ಆರೋಪಿಗಳಿಂದ 1,97,000 ರೂ. ಹಾಗೂ 2 ಮೊಬೈಲ್ ಫೋನ್​​​ಗಳು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿಚಾರಣೆ ನಡೆಸಿದಾಗ ಈ ಗ್ಯಾಂಗ್​ನಲ್ಲಿ ಹಲವಾರು ವ್ಯಕ್ತಿಗಳು ಭಾಗಿಯಾಗಿರುವ ವಿಚಾರ ತಿಳಿದು ಬಂದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details