ಕರ್ನಾಟಕ

karnataka

By

Published : Jul 26, 2023, 9:00 PM IST

ETV Bharat / state

ಡಿಜಿಟಲ್ ಯುಗದಲ್ಲಿ ದತ್ತಾಂಶ ಕಳವು ಪಿಡುಗಾಗಿದ್ದು, ಮೊಳಕೆಯಲ್ಲಿ ಚಿವುಟಿ ಹಾಕಬೇಕು: ಹೈಕೋರ್ಟ್

''ಡಿಜಿಟಲ್ ಯುಗದಲ್ಲಿ ದತ್ತಾಂಶ ಕಳತನ ಒಂದು ಪಿಡುಗಾಗಿದೆ. ಅದನ್ನು ಮೊಳಕೆಯಲ್ಲಿ ಚಿವುಟಿ ಹಾಕಬೇಕು'' ಹೈಕೋರ್ಟ್ ಹೇಳಿದೆ.

High Court
ಹೈಕೋರ್ಟ್

ಬೆಂಗಳೂರು:ಡಿಜಿಟಲ್ ಯುಗದಲ್ಲಿ ದತ್ತಾಂಶ ಕಳವು ಒಂದು ಪಿಡುಗಾಗಿದ್ದು, ಅದನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಬೇಕಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಖಾಸಗಿ ಕಂಪನಿಯ ದತ್ತಾಂಶ ಕದ್ದಿದ್ದ ಮತ್ತೊಂದು ಕಂಪನಿ ಸೇರಿದ್ದ ಬೆಂಗಳೂರು ಮೂಲದ ಆರ್. ನವೀನ್ ಮತ್ತು ಬಿ.ಎಸ್. ಸೃಷ್ಠಿ ಎಂಬುವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಲ್ಲದೆ, ಪ್ರಕರಣ ಸಂಬಂಧ ದಾಖಲೆಗಳನ್ನು ಪರಿಶೀಲಿಸಿದರೆ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಎದುರಾಗಲಿವೆ ಮತ್ತು ಈ ಹಂತದಲ್ಲಿ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಜೊತೆಗೆ, ಅರ್ಜಿದಾರರ ಮೇಲೆ ಒಂದು ಕಂಪನಿಯ ದತ್ತಾಂಶ ಪಡೆದು ಅದನ್ನು ಮತ್ತೊಂದು ಎದುರಾಳಿ ಕಂಪನಿಯ ವ್ಯಾಪಾರ ಅಭಿವೃದ್ಧಿಗೆ ಬಳಸಿಕೊಂಡಿರುವ ಆರೋಪವಿದೆ. ಅದು ಕಂಪನಿಯ ಮಾಹಿತಿ ಅಥವಾ ದತ್ತಾಂಶ ಸೋರಿಕೆ ಮಾಡುವಂತಿಲ್ಲ ಎಂಬ ಒಪ್ಪಂದದ ಉಲ್ಲಂಘನೆಯಾಗಿದೆ. ಅದು ಅಪರಾಧವಾಗುತ್ತದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣ ಹನ್ನೆಲೆ ಏನು?:ಅರ್ಜಿದಾರರು ಖಾಸಗಿ ಕಂಪನಿಯಲ್ಲಿ ಉದ್ಯೋಗಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಆ ಕಂಪನಿ ನಡೆಸಿದ ತನಿಖೆಯಲ್ಲಿ ಅವರಿಬ್ಬರು ಕೆಲವು ದತ್ತಾಂಶಗಳನ್ನು ಕದ್ದು, ಆ ಮೂಲಕ ಮಾಹಿತಿ ಹಂಚಿಕೆ ಮಾಡಿಕೊಳ್ಳುವಂತಿಲ್ಲ ಎಂಬ ಒಪ್ಪಂದವನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಅರ್ಜಿದಾರರು ಈ ಒಪ್ಪಂದ ಉಲ್ಲಂಘನೆ ಮಾಡಿ ದತ್ತಾಂಶವನ್ನು ಮತ್ತೊಂದು ಕಂಪನಿಗೆ ನೀಡುವ ಮೂಲಕ ಒಪ್ಪಂದದ ಉಲ್ಲಂಘನೆ ಮಾಡಿದ್ದರು.

ಈ ಸಂಬಂಧ ಆರೋಪಿಗಳಿಬ್ಬರು ತಾವು ಹಿಂದೆ ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರು ದತ್ತಾಂಶವನ್ನು ಕದ್ದು ಆನಂತರ ಪ್ರತಿ ಸ್ಪರ್ಧಿ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿ ಅದನ್ನು ಬಳಕೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಐಪಿಸಿ ಸೆಕ್ಷನ್ 408, 504, 506 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66 ಅಡಿ ಪ್ರಕರಣ ದಾಖಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಮ್ಮ ವಿರುದ್ಧದ ಆರೋಪಕ್ಕೆ ಯಾವುದೇ ಸೂಕ್ತ ಸಾಕ್ಷ್ಯಧಾರಗಳಿಲ್ಲ. ಗ್ರಾಹಕರ ದತ್ತಾಂಶ ಅದಾಗಲೇ ಸಾರ್ವಜನಿಕ ವಲಯದಲ್ಲಿದೆ. ಹಾಗಿರುವಾಗ ಅದನ್ನು ಕಳವು ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದ್ದರಿಂದ ಪ್ರಕರಣ ರದ್ದುಗೊಳಿಸಬೇಕು ಎಂದು ನ್ಯಾಯ ಪೀಠಕ್ಕೆ ಮನವಿ ಮಾಡಿದ್ದರು. ಈ ಮನವಿಯನ್ನು ತಿರಸ್ಕರಿಸಿರುವ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ:ಪ್ರಕರಣಗಳ ಶೀಘ್ರ ವಿಚಾರಣೆಗೊಳಪಡಿಸಲು ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ರವಿ ಪೂಜಾರಿ..

ABOUT THE AUTHOR

...view details