ಕರ್ನಾಟಕ

karnataka

ETV Bharat / state

ಪತ್ರಕರ್ತ ಹನುಮಂತಗೆ ಡಿಸಿಎಂ 5 ಲಕ್ಷ ರೂ. ನೆರವು ಘೋಷಣೆ - DCM Ashvath Narayan give 5 laks rupess to Hanumanthu Family

ಹನುಮಂತ ಅವರ ಅಕಾಲಿಕ ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ಹನುಮಂತ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ತಿಳಿಸಿದರು.

DCM Ashvath Narayan give 5 laks rupess to Hanumanthu Family
ಪತ್ರಕರ್ತ ಹನುಮಂತುಗೆ ಡಿಸಿಎಂ 5 ಲಕ್ಷ ರೂ. ನೆರವು ಘೋಷಣೆ

By

Published : Apr 21, 2020, 9:12 PM IST

ಬೆಂಗಳೂರು: ಅಪಘಾತದಲ್ಲಿ ಅಕಾಲ ಮರಣಕ್ಕೆ ತುತ್ತಾದ ಖಾಸಗಿ ವಾಹಿನಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತ ಅವರ ಕುಟುಂಬದ ನೆರವಿಗೆ ಧಾವಿಸಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ವೈಯಕ್ತಿಕ ನೆರವು ಘೋಷಿಸಿದ್ದಾರೆ.

ಹನುಮಂತ ಅವರ ಅಕಾಲಿಕ ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ಸದಾ ಕ್ರಿಯಾಶೀಲ, ಉತ್ಸಾಹಿ ಪತ್ರಕರ್ತರಾಗಿದ್ದ ಅವರು, ದಿಟ್ಟ ಮತ್ತು ಪ್ರಾಮಾಣಿಕತೆಯನ್ನು ನಂಬಿದ್ದರು. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಹನುಮಂತ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಹನುಮಂತ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದಲೂ ನೆರವು ಕೊಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

For All Latest Updates

ABOUT THE AUTHOR

...view details