ಕರ್ನಾಟಕ

karnataka

ಅರಣ್ಯದೊಳಗಿನ ಜನವಸತಿ ಪ್ರದೇಶಗಳಿಗೆ ಮೂಲಭೂತ‌ ಸೌಕರ್ಯ ಕಲ್ಪಿಸಲು ಡಿಸಿಎಂ ಸೂಚನೆ

By

Published : Jul 17, 2020, 4:09 PM IST

ಅರಣ್ಯದೊಳಗಿನ ಹಾಗೂ ಅರಣ್ಯದಂಚಿನ ಗ್ರಾಮಗಳಲ್ಲಿ ಹಾಗೂ ಜನವಸತಿ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಅಧಿನಿಯಮದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡಲು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Meeting
Meeting

ಬೆಂಗಳೂರು:ಅರಣ್ಯದೊಳಗಿನ ಹಾಗೂ ಅರಣ್ಯದಂಚಿನ ಗ್ರಾಮಗಳ ಜನವಸತಿ ಪ್ರದೇಶಗಳಲ್ಲಿ ಅರಣ್ಯ ಹಕ್ಕು ಅಧಿನಿಯಮದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡಲು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಅರಣ್ಯ ಹಕ್ಕು ಅಧಿನಿಯಮ ಅನುಷ್ಠಾನ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಹಕ್ಕಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಾಕಿ ಇರುವ ಸಮುದಾಯ ಅರಣ್ಯ ಹಕ್ಕು ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಲ್ಯಾಂಪ್ಸ್ ಸಹಕಾರ ಸಂಘಗಳಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುತಿಸಲಾಗಿರುವ 123 ಎಕರೆ ಜಮೀನನ್ನು ಉದ್ದೇಶಿತ ಯೋಜನೆಗಾಗಿ ಸದ್ಭಳಕೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ ಸುಗಮವಾಗಿ ಕಾರ್ಯನಿರ್ವಹಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಎಂದರು.

ಬಾಗಲಕೋಟೆ ಜಿಲ್ಲೆಯ ಮುಧೋಳ್, ಬೀಳಗಿ ಹಾಗೂ ಜಮಖಂಡಿ ತಾಲೂಕುಗಳಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ‌ ಸಲ್ಲಿಸಿರುವವರ ಜಮೀನುಗಳಲ್ಲಿ ಪಾಲಿಗಾನ್ಸ್ ಒದಗಿಸುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಡಿಸಿಎಂ ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಎಸ್ ಸಿಪಿ ಮತ್ತು ಟಿಎಸ್ ಪಿ ಯೋಜನೆಯ ಸಲಹೆಗಾರರಾದ ಇ.ವೆಂಕಟಯ್ಯ, ಅರಣ್ಯ ‌ಇಲಾಖೆಯ ಅಪರ‌ ಮುಖ್ಯಕಾರ್ಯದರ್ಶಿ ಸಂದೀಪ ದವೆ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಸಂಗಪ್ಪ, ಡಿಸಿಎಂ ಅವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ ಮತ್ತಿತರರು ಉಪಸ್ಥಿತರಿದ್ದರು.

ABOUT THE AUTHOR

...view details